ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲಾಡಳಿತ ಭವನದಲ್ಲಿನ ವಿವಿಧ ಇಲಾಖೆಗಳ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯಪಾಲನೆ ಕುರಿತು ರಿಯಾಲಿಟಿ ಚೆಕ್ ನಡೆಸಿದರು.

ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ ಇಲಾಖೆ, ಭೂ ದಾಖಲೆಗಳ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿದರು.

ಇತ್ತೀಚೆಗೆ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ನೌಕರರಿಗೆ ‘ಕರ್ತವ್ಯ’ ಆಪ್ ಮೂಲಕ ಡಿಜಿಟಲ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಇದರಂತೆ ಬೆಳಗ್ಗೆ 10 ಗಂಟೆಯೊಳಗೆ ಲಾಗಿನ್ ಹಾಗೂ ಸಂಜೆ 5.30ಕ್ಕೆ ಲಾಗ್‌ಔಟ್ ಮಾಡಬೇಕು ಎಂದು ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗ್ಗೆ 10.30ರಿಂದ 11 ಗಂಟೆಯ ನಡುವೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆಯೇ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ, ತಡವಾಗಿ ಬಂದಿದ್ದರೆ ಕಾರಣವೇನು, ಕ್ಷೇತ್ರ ಕಾರ್ಯಕ್ಕೆ ತೆರಳಿದ್ದರೆ ಅದರ ವಿವರವನ್ನು ‘ಕರ್ತವ್ಯ’ ಆಪ್‌ನಲ್ಲಿ ದಾಖಲಿಸಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಿದರು.

ಪರಿಶೀಲನೆ ವೇಳೆ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳ ಕುರ್ಚಿಗಳು ಖಾಲಿ ಇರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ, ಎಲ್ಲರೂ ನಿಗದಿತ ಸಮಯಕ್ಕೆ ‘ಕರ್ತವ್ಯ’ ಆಪ್‌ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ನಿಯಮ ಉಲ್ಲಂಘಿಸಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಬ್ಬಂದಿಯಲ್ಲಿ ಆತಂಕ:

ಸೋಮವಾರದಂತೆ ಸಿಬ್ಬಂದಿ ಹಂತ ಹಂತವಾಗಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿ ಅನಿರೀಕ್ಷಿತವಾಗಿ ವಿವಿಧ ಇಲಾಖೆಗಳಿಗೆ ಭೇಟಿ ನೀಡಿರುವುದು ಸಿಬ್ಬಂದಿಯಲ್ಲಿ ಆತಂಕ ಮೂಡಿಸಿತು. ತಮ್ಮ ಕಚೇರಿಯಲ್ಲೇ ಜಿಲ್ಲಾಧಿಕಾರಿಯನ್ನು ಕಂಡ ಕೆಲ ಸಿಬ್ಬಂದಿ ಅಚ್ಚರಿ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಇಂತಹ ಅನಿರೀಕ್ಷಿತ ಪರಿಶೀಲನೆಗಳು ಅಧಿಕಾರಿಗಳ ಸಮಯಪಾಲನೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಸರಿಯಾಗಿ ನಡೆಯಲು ಸಹಕಾರಿಯಾಗಲಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago