ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಂಗಳೂರು ಗ್ರಾಮಾಂತರ, ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗೆ ಭರಿಸಬೇಕಾಗಿರುವ ನೀರಿನ ಕರ, ಆಸ್ತಿ ಕರ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಹಣ ವಸೂಲಾತಿ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ದಾಖಲಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ಧಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪರಿಹಾರದ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಾಂಶ ಪ್ರಕರಣಗಳು, ಕಾನೂನಿನ ಅನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳು ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಹಾಗೂ ದೇವನಹಳ್ಳಿಗೆ ಆನ್ ಲೈನ್/ ಪಿಡಿಯೋ ಕಾನ್ಸರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಜೊತೆಗೆ ನ್ಯಾಯಾಲಯಗಳಲ್ಲಿ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 13.12.2025 ರಂದು ಆಯಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತನ್ನು ಏರ್ಪಡಿಸಲಾಗಿದ್ದು, ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ, ಆನ್ ಲೈನ್/ವಿಡಿಯೋ ಕಾನ್ವರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಮತ್ತು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಮಾಡಿಕೊಂಡರೆ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಲೋಕ್ ಆದಾಲತ್ ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago