ಡಿಸೆಂಬರ್ 21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ಡಿಸೆಂಬರ್ 21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಐದು ವರ್ಷದೊಳಗಿನ 96,727 ಮಕ್ಕಳು ಇದ್ದಾರೆ. ಡಿಸೆಂಬರ್ 21 ರಿಂದ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ದಿನಾಂಕ 22 ರಿಂದ 24 ರವೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿಲ್ಲದ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಮಕ್ಕಳ ಅಂಗವೈಕಲ್ಯ ತಡೆಯಲು ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕೆಯನ್ನು ಪಡೆಯದ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ನೀಡುವಂತೆ, ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಅವರಿಗೆ ಕೂಡ ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರು ಹೆಚ್ಚು ಸೇರುವ ಬಸ್‌ ನಿಲ್ದಾಣ, ಮಾರುಕಟ್ಟೆ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಹಾಗೂ ಟೋಲ್‌ ಗೇಟ್‌ಗಳಲ್ಲಿ ಮತ್ತು ರಾಷ್ಟೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚಿಸಿದರು.

ಮುಂಚಿತವಾಗಿ ಬೂತ್‌ಗಳ ನಿಯೋಜನೆ ಸಿಬ್ಬಂದಿ ನಿಯೋಜನೆ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪೋಲಿಯೋ ಲಸಿಕೆ ಹಾಕಿಸುವಂತೆ ವ್ಯಾಪಕ ಪ್ರಚಾರ ಮಾಡಿ ಎಲ್ಲಾ ಗ್ರಾಮಗಳಿಗೂ ತಲುಪುವಂತೆ ಸ್ವಚ್ಚತಾ ವಾಹಿನಿ ಮತ್ತು ಆಟೋಗಳ ಮೂಲಕ ಪ್ರಚಾರ ಮಾಡಿ ಲಸಿಕೆ ಅಭಿಯಾದ ಕುರಿತು ಮಾಹಿತಿ ನೀಡಿ ಜಿಲ್ಲೆಯ ಯಾವೊಂದು ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಕ್ಕ ಕೃಷ್ಣರೆಡ್ಡಿ, ಜಿಲ್ಲಾ ಸರ್ವೇಕ್ಷಣಾ ವೈದ್ಯಾಧಿಕಾರಿಗಳಾದ ಡಾ.ನಾಗರಾಜ್ ಎನ್. ಟಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

2 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

4 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

5 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

11 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

12 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

23 hours ago