ಡಿಸೆಂಬರ್ 21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ಡಿಸೆಂಬರ್ 21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಐದು ವರ್ಷದೊಳಗಿನ 96,727 ಮಕ್ಕಳು ಇದ್ದಾರೆ. ಡಿಸೆಂಬರ್ 21 ರಿಂದ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ದಿನಾಂಕ 22 ರಿಂದ 24 ರವೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿಲ್ಲದ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಮಕ್ಕಳ ಅಂಗವೈಕಲ್ಯ ತಡೆಯಲು ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕೆಯನ್ನು ಪಡೆಯದ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ನೀಡುವಂತೆ, ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಅವರಿಗೆ ಕೂಡ ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರು ಹೆಚ್ಚು ಸೇರುವ ಬಸ್‌ ನಿಲ್ದಾಣ, ಮಾರುಕಟ್ಟೆ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಹಾಗೂ ಟೋಲ್‌ ಗೇಟ್‌ಗಳಲ್ಲಿ ಮತ್ತು ರಾಷ್ಟೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚಿಸಿದರು.

ಮುಂಚಿತವಾಗಿ ಬೂತ್‌ಗಳ ನಿಯೋಜನೆ ಸಿಬ್ಬಂದಿ ನಿಯೋಜನೆ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪೋಲಿಯೋ ಲಸಿಕೆ ಹಾಕಿಸುವಂತೆ ವ್ಯಾಪಕ ಪ್ರಚಾರ ಮಾಡಿ ಎಲ್ಲಾ ಗ್ರಾಮಗಳಿಗೂ ತಲುಪುವಂತೆ ಸ್ವಚ್ಚತಾ ವಾಹಿನಿ ಮತ್ತು ಆಟೋಗಳ ಮೂಲಕ ಪ್ರಚಾರ ಮಾಡಿ ಲಸಿಕೆ ಅಭಿಯಾದ ಕುರಿತು ಮಾಹಿತಿ ನೀಡಿ ಜಿಲ್ಲೆಯ ಯಾವೊಂದು ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಕ್ಕ ಕೃಷ್ಣರೆಡ್ಡಿ, ಜಿಲ್ಲಾ ಸರ್ವೇಕ್ಷಣಾ ವೈದ್ಯಾಧಿಕಾರಿಗಳಾದ ಡಾ.ನಾಗರಾಜ್ ಎನ್. ಟಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

2 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago