Categories: ಕೃಷಿ

ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.

ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

2 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

5 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

6 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

9 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

9 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

9 hours ago