Categories: ಕೃಷಿ

ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.

ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago