Categories: ಕೃಷಿ

ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.

ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

4 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

15 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

15 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

19 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

24 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

1 day ago