Categories: ಕೃಷಿ

ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.

ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago