ಬೆಂಗಳೂರು ಗ್ರಾಮಾಂತರ: ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.
ರಾಜ್ಯಸಭೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, “ನಾನು ರಾಜ್ಯಸಭೆಗೆ ಆಕಾಂಕ್ಷಿ ಅಲ್ಲ, ಅಲ್ಲಿಗೆ ಹೋಗುವುದಿಲ್ಲ” ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರ:
ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗುವ ಪ್ರಶ್ನೆಗೆ ಅವರು ನಗುಮುಖದಲ್ಲಿ “ಕಾದು ನೋಡೋಣ” ಎಂದು ಉತ್ತರಿಸಿ ಕುತೂಹಲ ಮೂಡಿಸಿದರು.
ತಮಿಳುನಾಡು ಸರ್ಕಾರ ರಚನೆ ವಿಚಾರ:
ತಮಿಳುನಾಡು ಸರ್ಕಾರ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದರು.
ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವಂತಿದೆ ಎಂದು ಆರೋಪಿಸಿದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬುದು ಸಂವಿಧಾನಾತ್ಮಕ ಕ್ರಮ ಎಂದು ಹೇಳಿದರು.
ರಾಜ್ಯಪಾಲರು ಸಂವಿಧಾನವನ್ನು ಕಾಪಾಡಬೇಕು, ಆದರೆ ಅವರ ನಡೆ ಸಂವಿಧಾನಕ್ಕೆ ಅಪಮಾನವಾಗುತ್ತಿದೆ ಎಂದು ಟೀಕಿಸಿದರು.
ಟಿವಿಕೆ–ಕಾಂಗ್ರೆಸ್ ಮೈತ್ರಿ ವಿಚಾರ:
ಅಲ್ಲಿ ಸ್ಪಷ್ಟ ಬಹುಮತದ ಪರಿಸ್ಥಿತಿ ಇಲ್ಲದ ಕಾರಣ, ಜಾತ್ಯಾತೀತ ತತ್ವಗಳ ಆಧಾರದಲ್ಲಿ ಕೆಲಸ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಇದು ಪ್ರಸ್ತುತ ರಾಜಕೀಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿರುವ ವಿಷಯ ಎಂದು ಹೇಳಿದರು..
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…