ದೊಡ್ಡಬಳ್ಳಾಪುರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ರಸ್ತೆ ಸರ್ವೇ ಕೆಲಸಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಸೋಮವಾರ ಚಾಲನೆ ನೀಡಿದರು.
ನಗರಸಭೆ ವ್ಯಾಪ್ತಿಯಲ್ಲಿ ಬಹುನಿರೀಕ್ಷಿತ ರಸ್ತೆ ಅಗಲೀಕರಣಕ್ಕೆ ಸೋಮವಾರ ಸರ್ವೇ ಕಾರ್ಯವನ್ನು ಪ್ರಾರಂಭಿಸಲಾಗಿದೆ.
2011ರಲ್ಲೂ ಒಮ್ಮೆ ರಸ್ತೆ ಅಗಲೀಕರಣಕ್ಕಾಗಿ ಸರ್ವೇ ಕೆಲಸ ನಡೆಸಲಾಗಿತ್ತು. ಆದರೆ ಆರ್ಥಿಕ, ರಾಜಕೀಯ ಕಾರಣಗಳಿಂದಾಗಿ ಅಗಲೀಕರಣ ನೆನೆಗುದಿಗೆ ಬಿದ್ದಿತ್ತು. ಆದರೆ ಈಗ ಮತ್ತೆ ರಸ್ತೆ ಅಗಲೀಕರಣಕ್ಕಾಗಿ ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಗಾಂಧಿನಗರದ ವೈಭವ್ ಚಿತ್ರಮಂದಿರದವರೆಗೆ ಮೊದಲ ಹಂತದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು, ಇದಕ್ಕಾಗಿ ಪ್ರಥಮ ಹಂತದಲ್ಲಿ ಸರ್ವೇ ಕೆಲಸ ಪ್ರಾರಂಭಿಸಲಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಸದಸ್ಯ ಆನಂದ್, ಪೌರಾಯುಕ್ತ ಕಾರ್ತಿಕೇಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರಾಮೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…