ದೊಡ್ಡಬಳ್ಳಾಪುರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ರಸ್ತೆ ಸರ್ವೇ ಕೆಲಸಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಸೋಮವಾರ ಚಾಲನೆ ನೀಡಿದರು.
ನಗರಸಭೆ ವ್ಯಾಪ್ತಿಯಲ್ಲಿ ಬಹುನಿರೀಕ್ಷಿತ ರಸ್ತೆ ಅಗಲೀಕರಣಕ್ಕೆ ಸೋಮವಾರ ಸರ್ವೇ ಕಾರ್ಯವನ್ನು ಪ್ರಾರಂಭಿಸಲಾಗಿದೆ.
2011ರಲ್ಲೂ ಒಮ್ಮೆ ರಸ್ತೆ ಅಗಲೀಕರಣಕ್ಕಾಗಿ ಸರ್ವೇ ಕೆಲಸ ನಡೆಸಲಾಗಿತ್ತು. ಆದರೆ ಆರ್ಥಿಕ, ರಾಜಕೀಯ ಕಾರಣಗಳಿಂದಾಗಿ ಅಗಲೀಕರಣ ನೆನೆಗುದಿಗೆ ಬಿದ್ದಿತ್ತು. ಆದರೆ ಈಗ ಮತ್ತೆ ರಸ್ತೆ ಅಗಲೀಕರಣಕ್ಕಾಗಿ ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಗಾಂಧಿನಗರದ ವೈಭವ್ ಚಿತ್ರಮಂದಿರದವರೆಗೆ ಮೊದಲ ಹಂತದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು, ಇದಕ್ಕಾಗಿ ಪ್ರಥಮ ಹಂತದಲ್ಲಿ ಸರ್ವೇ ಕೆಲಸ ಪ್ರಾರಂಭಿಸಲಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಸದಸ್ಯ ಆನಂದ್, ಪೌರಾಯುಕ್ತ ಕಾರ್ತಿಕೇಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರಾಮೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…