ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಗಾಂಧಿನಗರದ ವೈಭವ್ ಚಿತ್ರಮಂದಿರದವರೆಗೆ ರಸ್ತೆ ಅಗಲೀಕಣಕ್ಕೆ ಸರ್ವೇ ಕಾರ್ಯಕ್ಕೆ ಚಾಲನೆ

ದೊಡ್ಡಬಳ್ಳಾಪುರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ರಸ್ತೆ ಸರ್ವೇ ಕೆಲಸಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಸೋಮವಾರ ಚಾಲನೆ ನೀಡಿದರು.

ನಗರಸಭೆ ವ್ಯಾಪ್ತಿಯಲ್ಲಿ ಬಹುನಿರೀಕ್ಷಿತ ರಸ್ತೆ ಅಗಲೀಕರಣಕ್ಕೆ ಸೋಮವಾರ ಸರ್ವೇ ಕಾರ್ಯವನ್ನು ಪ್ರಾರಂಭಿಸಲಾಗಿದೆ.

2011ರಲ್ಲೂ ಒಮ್ಮೆ ರಸ್ತೆ ಅಗಲೀಕರಣಕ್ಕಾಗಿ ಸರ್ವೇ ಕೆಲಸ ನಡೆಸಲಾಗಿತ್ತು. ಆದರೆ ಆರ್ಥಿಕ, ರಾಜಕೀಯ ಕಾರಣಗಳಿಂದಾಗಿ ಅಗಲೀಕರಣ ನೆನೆಗುದಿಗೆ ಬಿದ್ದಿತ್ತು. ಆದರೆ ಈಗ ಮತ್ತೆ ರಸ್ತೆ ಅಗಲೀಕರಣಕ್ಕಾಗಿ ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಗಾಂಧಿನಗರದ ವೈಭವ್ ಚಿತ್ರಮಂದಿರದವರೆಗೆ ಮೊದಲ ಹಂತದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು, ಇದಕ್ಕಾಗಿ ಪ್ರಥಮ ಹಂತದಲ್ಲಿ ಸರ್ವೇ ಕೆಲಸ ಪ್ರಾರಂಭಿಸಲಾಗಿದೆ.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಸದಸ್ಯ ಆನಂದ್, ಪೌರಾಯುಕ್ತ ಕಾರ್ತಿಕೇಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರಾಮೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago