ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಗಾಂಧಿನಗರದ ವೈಭವ್ ಚಿತ್ರಮಂದಿರದವರೆಗೆ ರಸ್ತೆ ಅಗಲೀಕಣಕ್ಕೆ ಸರ್ವೇ ಕಾರ್ಯಕ್ಕೆ ಚಾಲನೆ

ದೊಡ್ಡಬಳ್ಳಾಪುರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ರಸ್ತೆ ಸರ್ವೇ ಕೆಲಸಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಸೋಮವಾರ ಚಾಲನೆ ನೀಡಿದರು.

ನಗರಸಭೆ ವ್ಯಾಪ್ತಿಯಲ್ಲಿ ಬಹುನಿರೀಕ್ಷಿತ ರಸ್ತೆ ಅಗಲೀಕರಣಕ್ಕೆ ಸೋಮವಾರ ಸರ್ವೇ ಕಾರ್ಯವನ್ನು ಪ್ರಾರಂಭಿಸಲಾಗಿದೆ.

2011ರಲ್ಲೂ ಒಮ್ಮೆ ರಸ್ತೆ ಅಗಲೀಕರಣಕ್ಕಾಗಿ ಸರ್ವೇ ಕೆಲಸ ನಡೆಸಲಾಗಿತ್ತು. ಆದರೆ ಆರ್ಥಿಕ, ರಾಜಕೀಯ ಕಾರಣಗಳಿಂದಾಗಿ ಅಗಲೀಕರಣ ನೆನೆಗುದಿಗೆ ಬಿದ್ದಿತ್ತು. ಆದರೆ ಈಗ ಮತ್ತೆ ರಸ್ತೆ ಅಗಲೀಕರಣಕ್ಕಾಗಿ ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಗಾಂಧಿನಗರದ ವೈಭವ್ ಚಿತ್ರಮಂದಿರದವರೆಗೆ ಮೊದಲ ಹಂತದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು, ಇದಕ್ಕಾಗಿ ಪ್ರಥಮ ಹಂತದಲ್ಲಿ ಸರ್ವೇ ಕೆಲಸ ಪ್ರಾರಂಭಿಸಲಾಗಿದೆ.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಸದಸ್ಯ ಆನಂದ್, ಪೌರಾಯುಕ್ತ ಕಾರ್ತಿಕೇಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರಾಮೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

4 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

15 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

20 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago