ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೋಂದಣಿಗೆ ಯಾವುದೇ ಸಮಸ್ಯೆ ಆಗದಂತೆ ಕಂಪ್ಯೂಟರ್ ಗಳು, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ರೈತರಿಂದ ಖರೀದಿಸಿದ ಧಾನ್ಯಗಳನ್ನು ಕ್ರೋಢೀಕರಿಸಿ ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.
2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ, ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಶೋಭ ಹೆಚ್.ಟಿ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು , ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…