ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೋಂದಣಿಗೆ ಯಾವುದೇ ಸಮಸ್ಯೆ ಆಗದಂತೆ ಕಂಪ್ಯೂಟರ್ ಗಳು, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ರೈತರಿಂದ ಖರೀದಿಸಿದ ಧಾನ್ಯಗಳನ್ನು ಕ್ರೋಢೀಕರಿಸಿ ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.
2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ, ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಶೋಭ ಹೆಚ್.ಟಿ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು , ಸಿಬ್ಬಂದಿ ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…