ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಡಿಸೆಂಬರ್ 25ಕ್ಕೆ ಜರುಗಲಿದೆ. ಇದಕ್ಕೂ ಮುನ್ನ ಡಿ.10ರಿಂದ ದನಗಳ ಜಾತ್ರೆ ಪ್ರಾರಂಭವಾಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಈಗಾಗಲೇ ಜಾತ್ರೆಗೆ ಬೇಕಾಗಿರುವ ಎಲ್ಲಾ ಸಿದ್ಧತಾ ಕಾರ್ಯಗಳು ಪ್ರಾರಂಭಗೊಂಡಿವೆ.
ಸದ್ಯ ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಮೊದಲೇ ಸ್ಥಳಗಳನ್ನು ಗುರುತಿಸಿಕೊಂಡು ದಿಬ್ಬಗಳ ನಿರ್ಮಾಣ ಮತ್ತು ಶೆಡ್ ಗಳು, ಪೆಂಡಲ್ ನಿರ್ಮಾಣ ಕೆಲಸವನ್ನ ರೈತರು ಪ್ರಾರಂಭಿಸಿದ್ದಾರೆ.
ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು, ಆಂಧ್ರಪ್ರದೇಶದ ಹಿಂದೂಪುರ, ಅನಂತಪುರ, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.
ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಾರೆ.
*ಡಿಸೆಂಬರ್ 25 ಕ್ಕೆ ಬ್ರಹ್ಮರಥೋತ್ಸವ*
ಶ್ರೀ ಘಾಟಿ ಸುಬ್ರಮಣ್ಯರವರ ಬ್ರಹ್ಮರಥೋತ್ಸವ ಡಿಸೆಂಬರ್ 25 ರಂದು ನಡೆಯಲಿದೆ. ಈ ಬಾರಿ ವಿಶೇಷವಾಗಿ ಪುಷ್ಪಲಂಕಾರ ದೀಪ ಅಲಂಕಾರಗಳಿರುತ್ತದೆ. ಭಕ್ತಾದಿಗಳ ಅನುಕೂಲಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕ್ಯೂಲೈನ್ ವ್ಯವಸ್ಥೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ.
*ಸುಂಕ ರಹಿತ ಜಾತ್ರೆ*
ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಗರ್ಭಿಣಿ ಬಾಣಂತಿಯರಿಗೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ.
*ಡಿ.10 ರಿಂದ 18 ವರೆಗೆ ರಾಸುಗಳ ಜಾತ್ರೆ*
ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ ರಾಸುಗಳ ಜಾತ್ರೆ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…