ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದ್ದು, ಆದ್ದರಿಂದ ಇಂದು (ನ.14) ದೊಡ್ಡಬಳ್ಳಾಪುರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯದೀಶರಾದ ಶಿಲ್ಪಾ ಅವರ ನೇತೃತ್ವದಲ್ಲಿ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆಯನ್ನು ನಡೆಸಲಾಯಿತು..
ರಾಷ್ಟ್ರೀಯ ಲೋಕದಲಾತ್ ನಲ್ಲಿ ಚಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ಕಲಹಗಳು, ವಿಚ್ಛೇಧನ ಪ್ರಕರಣಗಳು ಹಾಗೂ ಲೋಕದಲಾತ್ ನಲ್ಲಿ ಬಗೆಹರಿಸಬಹುದಾದ ಎಲ್ಲಾ ಪ್ರಕಾರಣಗಳ ವಿಚಾರಣೆ ನಡೆಸಲಾಗುತ್ತದೆ. ಕಾನೂನು ಸೇವೆ ಎಲ್ಲರು ಪಡೆದುಕೊಳ್ಳಬೇಕು. ಪ್ರಕರಣಗಳ ಇತ್ಯಾರ್ಥಗಳು ಆದಷ್ಟು ಬೇಗ ಮುಕ್ತಾಯವಾಗಲು ಎಲ್ಲರು ಸಹ ಈ ಕಾನೂನು ಸೇವೆಯ ಸದುಪಯೋಗ ಪಡೆದುಕೊಂಡು ಲೋಕದಲಾತ್ ಯಶಸ್ವಿಯಾಗಲು ಸಹಕರಿಸುವಂತೆ ತಿಳಿಸಲಾಯಿತು…
ಈ ವೇಳೆ ದೊಡ್ಡಬಳ್ಳಾಪುರ ಸಿವಿಲ್ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಪ್ರೀತಿ ಹಾಗೂ ರವಿಬೇಟೆಗಾರ್, ವಕೀಲರು, ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ಅಭಿಯೋಜಕರು, ತಹಶೀಲ್ದಾರ್, ನಗರಸಭೆ ಆಯುಕ್ತ, ಗಣಿ, ಭೂ ವಿಜ್ಞಾನ ಇಲಾಖಾಧಿಕಾರಿ, ರಾಷ್ಟ್ರೀಯ, ಖಾಸಗಿ ಬ್ಯಾಂಕ್ ಗಳ ವ್ಯವಸ್ಥಾಪಕರು, ರಾಷ್ಟ್ರೀಯ ಹಾಗೂ ಖಾಸಗಿ ವಿಮಾ ಸಂಸ್ಥೆ ವ್ಯವಸ್ಥಾಪಕರು, ರಾಷ್ಟ್ರೀಯ ಹಾಗೂ ಖಾಸಗಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕರು, ಮೇಲ್ವಿಚಾರಣಾ ಸಮಿತಿ ಸದಸ್ಯರು, ಪೊಲೀಸ್ ಇಲಾಖಾ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…