ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದ್ದು, ಆದ್ದರಿಂದ ಇಂದು (ನ.14) ದೊಡ್ಡಬಳ್ಳಾಪುರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯದೀಶರಾದ ಶಿಲ್ಪಾ ಅವರ ನೇತೃತ್ವದಲ್ಲಿ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆಯನ್ನು ನಡೆಸಲಾಯಿತು..
ರಾಷ್ಟ್ರೀಯ ಲೋಕದಲಾತ್ ನಲ್ಲಿ ಚಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ಕಲಹಗಳು, ವಿಚ್ಛೇಧನ ಪ್ರಕರಣಗಳು ಹಾಗೂ ಲೋಕದಲಾತ್ ನಲ್ಲಿ ಬಗೆಹರಿಸಬಹುದಾದ ಎಲ್ಲಾ ಪ್ರಕಾರಣಗಳ ವಿಚಾರಣೆ ನಡೆಸಲಾಗುತ್ತದೆ. ಕಾನೂನು ಸೇವೆ ಎಲ್ಲರು ಪಡೆದುಕೊಳ್ಳಬೇಕು. ಪ್ರಕರಣಗಳ ಇತ್ಯಾರ್ಥಗಳು ಆದಷ್ಟು ಬೇಗ ಮುಕ್ತಾಯವಾಗಲು ಎಲ್ಲರು ಸಹ ಈ ಕಾನೂನು ಸೇವೆಯ ಸದುಪಯೋಗ ಪಡೆದುಕೊಂಡು ಲೋಕದಲಾತ್ ಯಶಸ್ವಿಯಾಗಲು ಸಹಕರಿಸುವಂತೆ ತಿಳಿಸಲಾಯಿತು…
ಈ ವೇಳೆ ದೊಡ್ಡಬಳ್ಳಾಪುರ ಸಿವಿಲ್ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಪ್ರೀತಿ ಹಾಗೂ ರವಿಬೇಟೆಗಾರ್, ವಕೀಲರು, ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ಅಭಿಯೋಜಕರು, ತಹಶೀಲ್ದಾರ್, ನಗರಸಭೆ ಆಯುಕ್ತ, ಗಣಿ, ಭೂ ವಿಜ್ಞಾನ ಇಲಾಖಾಧಿಕಾರಿ, ರಾಷ್ಟ್ರೀಯ, ಖಾಸಗಿ ಬ್ಯಾಂಕ್ ಗಳ ವ್ಯವಸ್ಥಾಪಕರು, ರಾಷ್ಟ್ರೀಯ ಹಾಗೂ ಖಾಸಗಿ ವಿಮಾ ಸಂಸ್ಥೆ ವ್ಯವಸ್ಥಾಪಕರು, ರಾಷ್ಟ್ರೀಯ ಹಾಗೂ ಖಾಸಗಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕರು, ಮೇಲ್ವಿಚಾರಣಾ ಸಮಿತಿ ಸದಸ್ಯರು, ಪೊಲೀಸ್ ಇಲಾಖಾ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…