ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದ್ದು, ಆದ್ದರಿಂದ ಇಂದು (ನ.14) ದೊಡ್ಡಬಳ್ಳಾಪುರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯದೀಶರಾದ ಶಿಲ್ಪಾ ಅವರ ನೇತೃತ್ವದಲ್ಲಿ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆಯನ್ನು ನಡೆಸಲಾಯಿತು..
ರಾಷ್ಟ್ರೀಯ ಲೋಕದಲಾತ್ ನಲ್ಲಿ ಚಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ಕಲಹಗಳು, ವಿಚ್ಛೇಧನ ಪ್ರಕರಣಗಳು ಹಾಗೂ ಲೋಕದಲಾತ್ ನಲ್ಲಿ ಬಗೆಹರಿಸಬಹುದಾದ ಎಲ್ಲಾ ಪ್ರಕಾರಣಗಳ ವಿಚಾರಣೆ ನಡೆಸಲಾಗುತ್ತದೆ. ಕಾನೂನು ಸೇವೆ ಎಲ್ಲರು ಪಡೆದುಕೊಳ್ಳಬೇಕು. ಪ್ರಕರಣಗಳ ಇತ್ಯಾರ್ಥಗಳು ಆದಷ್ಟು ಬೇಗ ಮುಕ್ತಾಯವಾಗಲು ಎಲ್ಲರು ಸಹ ಈ ಕಾನೂನು ಸೇವೆಯ ಸದುಪಯೋಗ ಪಡೆದುಕೊಂಡು ಲೋಕದಲಾತ್ ಯಶಸ್ವಿಯಾಗಲು ಸಹಕರಿಸುವಂತೆ ತಿಳಿಸಲಾಯಿತು…
ಈ ವೇಳೆ ದೊಡ್ಡಬಳ್ಳಾಪುರ ಸಿವಿಲ್ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಪ್ರೀತಿ ಹಾಗೂ ರವಿಬೇಟೆಗಾರ್, ವಕೀಲರು, ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ಅಭಿಯೋಜಕರು, ತಹಶೀಲ್ದಾರ್, ನಗರಸಭೆ ಆಯುಕ್ತ, ಗಣಿ, ಭೂ ವಿಜ್ಞಾನ ಇಲಾಖಾಧಿಕಾರಿ, ರಾಷ್ಟ್ರೀಯ, ಖಾಸಗಿ ಬ್ಯಾಂಕ್ ಗಳ ವ್ಯವಸ್ಥಾಪಕರು, ರಾಷ್ಟ್ರೀಯ ಹಾಗೂ ಖಾಸಗಿ ವಿಮಾ ಸಂಸ್ಥೆ ವ್ಯವಸ್ಥಾಪಕರು, ರಾಷ್ಟ್ರೀಯ ಹಾಗೂ ಖಾಸಗಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕರು, ಮೇಲ್ವಿಚಾರಣಾ ಸಮಿತಿ ಸದಸ್ಯರು, ಪೊಲೀಸ್ ಇಲಾಖಾ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…