ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಧುಮಠ ಗ್ರಾಮದ ರಸ್ತೆ ಬದಿಯ ಮೋರಿಯೊಂದರ ಹಳ್ಳದಲ್ಲಿ ಬೈಕ್ ಸಮೇತ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಎನ್ (15) ಮೃತ ಬಾಲಕನಾಗಿದ್ದು, ಈತ ಚಿಕ್ಕಬಳ್ಳಾಪುರ ನಗರದ ಬೆಸ್ಟ್ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ಇಂದು ಸಾಧು ಮಠ ಗ್ರಾಮದ ರಸ್ತೆ ಬದಿಯ ಮೋರಿಯಲ್ಲಿ ಬಾಲಕನ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬೈಕ್ ಸಹ ಹಳ್ಳದಲ್ಲಿ ಬಿದ್ದಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆ ಹಾಗೂ ತಾಯಿ ಇಬ್ಬರೂ ಆಘಾತಕ್ಕೊಳಗಾಗಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಮಾತನಾಡಿರುವ ತಾಯಿ ಹಾಗೂ ತಂದೆ, ಡಿಸೆಂಬರ್ 15 ರಂದು ನನ್ನ ಮಗನಿಗೆ ಹುಷಾರ್ ಇಲ್ಲದ ಕಾರಣ ಕಾಲೇಜಿಗೆ ಹೋಗದೇ ಮನೆಯಲ್ಲಿ ಇದ್ದ. ಮಗನಿಗೆ ಸ್ನಾನ ಮಾಡಿಕೊ ಅಂತ ಹೇಳಿದೆ. ಅದಾದ್ಮೇಲೆ ಬೆಳಗ್ಗೆ 7:30 ಗಂಟೆಗೆ ಊರ ಒಳಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದವನು ಸಂಜೆಯಾದರೂ ಮನೆಗೆ ಬರಲಿಲ್ಲ. ನಂತರ ಮಗನಿಗೆ ಫೋನ್‌ ಮಾಡಿದರೆ ಸ್ವಿಚ್‌ ಆಫ್‌ ಅಂತ ಬಂತು.

ನಂತರ ಸ್ನೇಹಿತರನ್ನ ವಿಚಾರಣೆ ಮಾಡಿದೆವು ಹಾಗೂ ಸಂಬಂಧಿಕರ ಮನೆಯಲ್ಲಿ ಫೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗಿರಲಿಲ್ಲ. ನಮಗೆ ನಮ್ಮ ಪಕ್ಕದ ಮನೆಯವರ ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಿದ್ದ ಅಂತ ತಿಳಿದು ಬಂತು. ಆದ್ದರಿಂದ ಕಾಣೆಯಾಗಿರುವ ನನ್ನ ಮಗನನ್ನ ಪತ್ತೆ ಮಾಡಿಕೊಡಬೇಕೆಂದು ಡಿ.16ರಂದು ಮಹಿಳಾ ಠಾಣೆಯಲ್ಲಿ ನಾವು ದೂರು ನೀಡಿದ್ದೆವು. ಆದರೆ ಇಂದು ನಮ್ಮ ಮಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಅಪಘಾತ ಅಲ್ಲ, ಉದ್ದೇಶಪೂರ್ವಕವಾಗಿಯೇ ನಮ್ಮ ಮಗನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಪೊಲೀಸರ ಸಂಪೂರ್ಣ ತನಿಖೆಯಿಂದ ಇದು ಅಪಘಾತವೋ ಇಲ್ಲ ಕೊಲೆಯೋ ಎಂಬುದು ತಿಳಿದು ಬರಬೇಕಿದೆ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

12 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

13 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

14 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

15 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

23 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago