ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ ಸಾಧುಮಠ ರಸ್ತೆಯಲ್ಲಿ ಸಮೀಪ ಪತ್ತೆಯಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಎನ್(15) ಮೃತ ಬಾಲಕ.
ನಿಶಾಂಕ್ ಎನ್ ಚಿಕ್ಕಬಳ್ಳಾಪುರದಲ್ಲಿರುವ ಬೆಸ್ಟ್ ಪಿ.ಯು.ಸಿ ಕಾಲೇಜ್ ನಲ್ಲಿ ಪ್ರಥಮ ವರ್ಷದ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದನು. ಡಿ.15ರಂದು ನನ್ನ ಮಗನಿಗೆ ಹುಷಾರ್ ಇಲ್ಲದ ಕಾರಣ ಕಾಲೇಜಿಗೆ ಹೋಗದೆ ಮನೆಯಲ್ಲಿ ಇದ್ದನು, ನಾನು ನನ್ನ ಮಗನಿಗೆ ಸ್ನಾನ ಮಾಡಿಕೊ ಎಂದು ಹೇಳಿದೆ. ನನ್ನ ಮಗ ಅಂದು ಬೆಳಗ್ಗೆ 7:30 ಗಂಟೆಗೆ ಊರು ಒಳಗಡೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ಸಂಜೆಯಾದರೂ ಮನೆಗೆ ಬಂದಿರುವುದಿಲ್ಲ, ನಂತರ ನಾನು ನನ್ನ ಮಗನ ಫೋನ್ ನಂಬರ್ 9108685205 ಗೆ ಪೋನ್ ಮಾಡದರೆ ಫೋನ್ ಸ್ಟ್ರೀಚ್ ಆಫ್ ಬಂದಿತು. ನಂತರ ನನ್ನ ಸ್ನೇಹಿತರನ್ನು ವಿಚಾರಣೆ ಮಾಡಿದೆವು ಹಾಗೂ ಸಂಬಂಧಿಕರ ಮನೆಯಲ್ಲಿ ಫೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗಿರುವುದಿಲ್ಲ. ನಮಗೆ ನಮ್ಮ ಪಕ್ಕದ ಮನೆಯವರ ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಿರಬಹುದೆಂಬ ಅನುಮಾನವಿರುತ್ತದೆ, ಆದ್ದರಿಂದ ಕಾಣೆಯಾಗಿರುವ ನನ್ನ ಮಗನನ್ನು ಪತ್ತೆ ಮಾಡಿಕೊಡಬೇಕೆಂದು ಡಿ.16ರಂದು ಮಹಿಳಾ ಠಾಣೆಯಲ್ಲಿ ಮೃತನ ತಂದೆ ನಾರಾಯಣಸ್ವಾಮಿ ದೂರು ನೀಡಿರುತ್ತಾರೆ..
12ದಿನಗಳ ನಂತರ ಇಂದು ಎನ್ ನಿಶಾಂಕ್ ಮೃತದೇಹ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ ಸಾಧುಮಠ ರಸ್ತೆಯಲ್ಲಿ ಸಮೀಪ ಪತ್ತೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…