ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಧುಮಠ ಗ್ರಾಮದ ರಸ್ತೆ ಬದಿಯ ಮೋರಿಯೊಂದರ ಹಳ್ಳದಲ್ಲಿ ಬೈಕ್ ಸಮೇತ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಎನ್ (15) ಮೃತ ಬಾಲಕನಾಗಿದ್ದು, ಈತ ಚಿಕ್ಕಬಳ್ಳಾಪುರ ನಗರದ ಬೆಸ್ಟ್ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ಇಂದು ಸಾಧು ಮಠ ಗ್ರಾಮದ ರಸ್ತೆ ಬದಿಯ ಮೋರಿಯಲ್ಲಿ ಬಾಲಕನ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬೈಕ್ ಸಹ ಹಳ್ಳದಲ್ಲಿ ಬಿದ್ದಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆ ಹಾಗೂ ತಾಯಿ ಇಬ್ಬರೂ ಆಘಾತಕ್ಕೊಳಗಾಗಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಮಾತನಾಡಿರುವ ತಾಯಿ ಹಾಗೂ ತಂದೆ, ಡಿಸೆಂಬರ್ 15 ರಂದು ನನ್ನ ಮಗನಿಗೆ ಹುಷಾರ್ ಇಲ್ಲದ ಕಾರಣ ಕಾಲೇಜಿಗೆ ಹೋಗದೇ ಮನೆಯಲ್ಲಿ ಇದ್ದ. ಮಗನಿಗೆ ಸ್ನಾನ ಮಾಡಿಕೊ ಅಂತ ಹೇಳಿದೆ. ಅದಾದ್ಮೇಲೆ ಬೆಳಗ್ಗೆ 7:30 ಗಂಟೆಗೆ ಊರ ಒಳಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದವನು ಸಂಜೆಯಾದರೂ ಮನೆಗೆ ಬರಲಿಲ್ಲ. ನಂತರ ಮಗನಿಗೆ ಫೋನ್‌ ಮಾಡಿದರೆ ಸ್ವಿಚ್‌ ಆಫ್‌ ಅಂತ ಬಂತು.

ನಂತರ ಸ್ನೇಹಿತರನ್ನ ವಿಚಾರಣೆ ಮಾಡಿದೆವು ಹಾಗೂ ಸಂಬಂಧಿಕರ ಮನೆಯಲ್ಲಿ ಫೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗಿರಲಿಲ್ಲ. ನಮಗೆ ನಮ್ಮ ಪಕ್ಕದ ಮನೆಯವರ ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಿದ್ದ ಅಂತ ತಿಳಿದು ಬಂತು. ಆದ್ದರಿಂದ ಕಾಣೆಯಾಗಿರುವ ನನ್ನ ಮಗನನ್ನ ಪತ್ತೆ ಮಾಡಿಕೊಡಬೇಕೆಂದು ಡಿ.16ರಂದು ಮಹಿಳಾ ಠಾಣೆಯಲ್ಲಿ ನಾವು ದೂರು ನೀಡಿದ್ದೆವು. ಆದರೆ ಇಂದು ನಮ್ಮ ಮಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಅಪಘಾತ ಅಲ್ಲ, ಉದ್ದೇಶಪೂರ್ವಕವಾಗಿಯೇ ನಮ್ಮ ಮಗನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಪೊಲೀಸರ ಸಂಪೂರ್ಣ ತನಿಖೆಯಿಂದ ಇದು ಅಪಘಾತವೋ ಇಲ್ಲ ಕೊಲೆಯೋ ಎಂಬುದು ತಿಳಿದು ಬರಬೇಕಿದೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

20 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago