ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಧುಮಠ ಗ್ರಾಮದ ರಸ್ತೆ ಬದಿಯ ಮೋರಿಯೊಂದರ ಹಳ್ಳದಲ್ಲಿ ಬೈಕ್ ಸಮೇತ ಬಾಲಕನ ಶವ ಪತ್ತೆಯಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಎನ್ (15) ಮೃತ ಬಾಲಕನಾಗಿದ್ದು, ಈತ ಚಿಕ್ಕಬಳ್ಳಾಪುರ ನಗರದ ಬೆಸ್ಟ್ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ಇಂದು ಸಾಧು ಮಠ ಗ್ರಾಮದ ರಸ್ತೆ ಬದಿಯ ಮೋರಿಯಲ್ಲಿ ಬಾಲಕನ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬೈಕ್ ಸಹ ಹಳ್ಳದಲ್ಲಿ ಬಿದ್ದಿದೆ.
ಮಗನ ಸಾವಿನ ಸುದ್ದಿ ಕೇಳಿ ತಂದೆ ಹಾಗೂ ತಾಯಿ ಇಬ್ಬರೂ ಆಘಾತಕ್ಕೊಳಗಾಗಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಮಾತನಾಡಿರುವ ತಾಯಿ ಹಾಗೂ ತಂದೆ, ಡಿಸೆಂಬರ್ 15 ರಂದು ನನ್ನ ಮಗನಿಗೆ ಹುಷಾರ್ ಇಲ್ಲದ ಕಾರಣ ಕಾಲೇಜಿಗೆ ಹೋಗದೇ ಮನೆಯಲ್ಲಿ ಇದ್ದ. ಮಗನಿಗೆ ಸ್ನಾನ ಮಾಡಿಕೊ ಅಂತ ಹೇಳಿದೆ. ಅದಾದ್ಮೇಲೆ ಬೆಳಗ್ಗೆ 7:30 ಗಂಟೆಗೆ ಊರ ಒಳಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದವನು ಸಂಜೆಯಾದರೂ ಮನೆಗೆ ಬರಲಿಲ್ಲ. ನಂತರ ಮಗನಿಗೆ ಫೋನ್ ಮಾಡಿದರೆ ಸ್ವಿಚ್ ಆಫ್ ಅಂತ ಬಂತು.
ನಂತರ ಸ್ನೇಹಿತರನ್ನ ವಿಚಾರಣೆ ಮಾಡಿದೆವು ಹಾಗೂ ಸಂಬಂಧಿಕರ ಮನೆಯಲ್ಲಿ ಫೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗಿರಲಿಲ್ಲ. ನಮಗೆ ನಮ್ಮ ಪಕ್ಕದ ಮನೆಯವರ ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಿದ್ದ ಅಂತ ತಿಳಿದು ಬಂತು. ಆದ್ದರಿಂದ ಕಾಣೆಯಾಗಿರುವ ನನ್ನ ಮಗನನ್ನ ಪತ್ತೆ ಮಾಡಿಕೊಡಬೇಕೆಂದು ಡಿ.16ರಂದು ಮಹಿಳಾ ಠಾಣೆಯಲ್ಲಿ ನಾವು ದೂರು ನೀಡಿದ್ದೆವು. ಆದರೆ ಇಂದು ನಮ್ಮ ಮಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಅಪಘಾತ ಅಲ್ಲ, ಉದ್ದೇಶಪೂರ್ವಕವಾಗಿಯೇ ನಮ್ಮ ಮಗನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಪೊಲೀಸರ ಸಂಪೂರ್ಣ ತನಿಖೆಯಿಂದ ಇದು ಅಪಘಾತವೋ ಇಲ್ಲ ಕೊಲೆಯೋ ಎಂಬುದು ತಿಳಿದು ಬರಬೇಕಿದೆ.
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…