ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಧುಮಠ ಗ್ರಾಮದ ರಸ್ತೆ ಬದಿಯ ಮೋರಿಯೊಂದರ ಹಳ್ಳದಲ್ಲಿ ಬೈಕ್ ಸಮೇತ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಎನ್ (15) ಮೃತ ಬಾಲಕನಾಗಿದ್ದು, ಈತ ಚಿಕ್ಕಬಳ್ಳಾಪುರ ನಗರದ ಬೆಸ್ಟ್ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ಇಂದು ಸಾಧು ಮಠ ಗ್ರಾಮದ ರಸ್ತೆ ಬದಿಯ ಮೋರಿಯಲ್ಲಿ ಬಾಲಕನ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬೈಕ್ ಸಹ ಹಳ್ಳದಲ್ಲಿ ಬಿದ್ದಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆ ಹಾಗೂ ತಾಯಿ ಇಬ್ಬರೂ ಆಘಾತಕ್ಕೊಳಗಾಗಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಮಾತನಾಡಿರುವ ತಾಯಿ ಹಾಗೂ ತಂದೆ, ಡಿಸೆಂಬರ್ 15 ರಂದು ನನ್ನ ಮಗನಿಗೆ ಹುಷಾರ್ ಇಲ್ಲದ ಕಾರಣ ಕಾಲೇಜಿಗೆ ಹೋಗದೇ ಮನೆಯಲ್ಲಿ ಇದ್ದ. ಮಗನಿಗೆ ಸ್ನಾನ ಮಾಡಿಕೊ ಅಂತ ಹೇಳಿದೆ. ಅದಾದ್ಮೇಲೆ ಬೆಳಗ್ಗೆ 7:30 ಗಂಟೆಗೆ ಊರ ಒಳಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದವನು ಸಂಜೆಯಾದರೂ ಮನೆಗೆ ಬರಲಿಲ್ಲ. ನಂತರ ಮಗನಿಗೆ ಫೋನ್‌ ಮಾಡಿದರೆ ಸ್ವಿಚ್‌ ಆಫ್‌ ಅಂತ ಬಂತು.

ನಂತರ ಸ್ನೇಹಿತರನ್ನ ವಿಚಾರಣೆ ಮಾಡಿದೆವು ಹಾಗೂ ಸಂಬಂಧಿಕರ ಮನೆಯಲ್ಲಿ ಫೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗಿರಲಿಲ್ಲ. ನಮಗೆ ನಮ್ಮ ಪಕ್ಕದ ಮನೆಯವರ ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಿದ್ದ ಅಂತ ತಿಳಿದು ಬಂತು. ಆದ್ದರಿಂದ ಕಾಣೆಯಾಗಿರುವ ನನ್ನ ಮಗನನ್ನ ಪತ್ತೆ ಮಾಡಿಕೊಡಬೇಕೆಂದು ಡಿ.16ರಂದು ಮಹಿಳಾ ಠಾಣೆಯಲ್ಲಿ ನಾವು ದೂರು ನೀಡಿದ್ದೆವು. ಆದರೆ ಇಂದು ನಮ್ಮ ಮಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಅಪಘಾತ ಅಲ್ಲ, ಉದ್ದೇಶಪೂರ್ವಕವಾಗಿಯೇ ನಮ್ಮ ಮಗನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಪೊಲೀಸರ ಸಂಪೂರ್ಣ ತನಿಖೆಯಿಂದ ಇದು ಅಪಘಾತವೋ ಇಲ್ಲ ಕೊಲೆಯೋ ಎಂಬುದು ತಿಳಿದು ಬರಬೇಕಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago