ಡಿ.17ಕ್ಕೆ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಪ್ರತಿಯೊಬ್ಬರಿಗೂ ಭಾರತ ಸಂವಿಧಾನ‌ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅರಿವು ಇರಲೇಬೇಕು. ಈ ನಿಟ್ಟಿನಲ್ಲಿ ಸಂವಿಧಾನದ ಆಶಯಗಳು, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳು ಪ್ರತಿಯೊಂದು ಮನೆಮನೆಗೂ ತಲುಪಿಸುವ ಕೆಲಸ ನಿರಂತರವಾಗಿ ನಾವೆಲ್ಲರೂ ಮಾಡಬೇಕಾಗಿದೆ ಎಂದು ದಲಿತ ಮುಖಂಡ‌ ರಾಜು ಸಣ್ಣಕ್ಕಿ ಹೇಳಿದರು.

ಈ ಕುರಿತು ನಗರದ ಪ್ರವಾಸ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನಿನ ಅರಿವು ಇದ್ದರೆ ಅನ್ಯಾಯ, ಮೋಸ, ದಬ್ಬಾಳಿಕೆ‌ ಸೇರಿದಂತೆ ಇತರೆ ತೊಂದರೆಗಳಿಂದ ಪಾರಾಗಬಹುದು ಎಂದರು.

ನಂತರ ವಿದ್ಯಾರ್ಥಿನಿ ನಂದಿನಿ ಮಾತನಾಡಿ, ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಆಳವಾಗಿ ಅಧ್ಯಯನ ಮಾಡಬೇಕು. ಅವರ ವಿಚಾರಧಾರೆಗಳನ್ನ ಯುವಮನಸ್ಸುಗಳು ಅರಿತುಕೊಂಡು ಇತರರಿಗೆ ಜಾಗೃತಿ ಮೂಡಿಸಬೇಕು ಎಂದರು.

ಭಾರತದ ಪಾಲಿಗೆ ಸಂವಿಧಾನವೇ ಧರ್ಮ, ಸಂವಿಧಾನ ಪುಸ್ತಕವೇ ಧರ್ಮಗ್ರಂಥ. ಸಂವಿಧಾನ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಧರ್ಮಗಳ ಗ್ರಂಥಗಳಿಲ್ಲದೆ ನಾವು ಬದುಕಬಹುದು ಆದರೆ ಸಂವಿಧಾನ ಇಲ್ಲದೆ ಬದುಕಲು ಆಗುವುದಿಲ್ಲ. ದೇಶದ ಪ್ರತಿಯೊಬ್ಬನಿಗೂ ಮೂಲಭೂತ ಹಕ್ಕುಗಳಾಗಿ ಸ್ವಾತಂತ್ರ್ಯ, ಸಮಾನತೆ, ಶೋಷಣೆ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ನೀಡಲಾಗಿದೆ. ಇಲ್ಲಿ ಯಾರೊಬ್ಬರೂ ಕೀಳಲ್ಲ, ಮೇಲೂ ಅಲ್ಲ ಎಂದರು.

ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಡಿ.17ರ ಭಾನುವಾರ ಬೆಳಗ್ಗೆ 11ಕ್ಕೆ ದೊಡ್ಡಬಳ್ಳಾಪುರ ನಗರದ ಕೆಎಸ್ ಆರ್ ಟಿಸಿ ಡಿಪೋ ಮುಂಭಾಗದಲ್ಲಿರುವ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು‌ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಮುಖಂಡ ಹೇಮಂತ್ ಕುಮಾರ್.ಎಂ ಹೇಳಿದರು.

ವಿದ್ಯಾರ್ಥಿ‌ ಹಾಗೂ ಯುವಜನರಿಗೆ ಸಂವಿಧಾನದ ಮಹತ್ವ ಮತ್ತು ಅನಿವಾರ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನ ಆಯೋಜನೆ ಮಾಡಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೊಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

 ನಿಬಂದನೆಗಳು: 

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವವರು ನೋಂದಣಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಗಳನ್ನು ಮುಂಚಿತವಾಗಿ ವಾಟ್ಸಾಪ್ ಮೂಲಕ ಕಳುಹಿಸಬೇಕು.

ಸ್ಪರ್ಧೆಯಲ್ಲಿ ಭಾಗವಹಿಸಲು ಬರುವಾಗ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಖಡ್ಡಾಯವಾಗಿ ತರಬೇಕು.

ಬರಹ ಸ್ಪಷ್ಟ ಮತ್ತು ತೀಕ್ಷವಾಗಿರಬೇಕು, ವಿಷಯದ ಕುರಿತು 5 ಪುಟಗಳು ಮೀರದಂತೆ ಪ್ರಬಂಧ ಬರೆಯಬೇಕು.

ಆಸಕ್ತರು ಮೊದಲೇ ಕರೆಮಾಡಿ ತಮ್ಮ ಹೆಸರುಗಳನ್ನು ಡಿ.15ರೊಳಗಾಗಿ ನೋಂದಾಯಿಸಿಕೊಳ್ಳಬೇಕು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಡಿ.27 ರಂದು ನಡೆಯುವ ಸಂಘಟನೆಯ ಜಿಲ್ಲಾ ಸಮ್ಮೇಳನದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.

ಪ್ರಥಮ ಬಹುಮಾನ: 10000, ದ್ವಿತಿಯ ಬಹುಮಾನ: 5000, ತೃತಿಯ ಬಹುಮಾನ: 3000 ನೀಡಲಾಗುವುದು.ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸಮಾದಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ನೊಂದಣಿಗಾಗಿ 9986355926 ಸಂಖ್ಯೆಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9900735150, 9845076730, 9449463866, 9535418449, 7975325014, 9620649680, 9986573503

ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ನೋಂದಣಿಗಾಗಿ ಈ ಕೆಳಗಿನ ಲಿಂಕ್ ಬಳಸಿ

https://forms.gle/wBUDUegUx6Sx6fSX7

ಈ ವೇಳೆ ವರ್ಷ, ಅಪ್ಪುರಾಜ್, ಮಾನಸ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

23 minutes ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

16 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

17 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

23 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

24 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago