ಡಿ.17ಕ್ಕೆ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಪ್ರತಿಯೊಬ್ಬರಿಗೂ ಭಾರತ ಸಂವಿಧಾನ‌ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅರಿವು ಇರಲೇಬೇಕು. ಈ ನಿಟ್ಟಿನಲ್ಲಿ ಸಂವಿಧಾನದ ಆಶಯಗಳು, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳು ಪ್ರತಿಯೊಂದು ಮನೆಮನೆಗೂ ತಲುಪಿಸುವ ಕೆಲಸ ನಿರಂತರವಾಗಿ ನಾವೆಲ್ಲರೂ ಮಾಡಬೇಕಾಗಿದೆ ಎಂದು ದಲಿತ ಮುಖಂಡ‌ ರಾಜು ಸಣ್ಣಕ್ಕಿ ಹೇಳಿದರು.

ಈ ಕುರಿತು ನಗರದ ಪ್ರವಾಸ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನಿನ ಅರಿವು ಇದ್ದರೆ ಅನ್ಯಾಯ, ಮೋಸ, ದಬ್ಬಾಳಿಕೆ‌ ಸೇರಿದಂತೆ ಇತರೆ ತೊಂದರೆಗಳಿಂದ ಪಾರಾಗಬಹುದು ಎಂದರು.

ನಂತರ ವಿದ್ಯಾರ್ಥಿನಿ ನಂದಿನಿ ಮಾತನಾಡಿ, ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಆಳವಾಗಿ ಅಧ್ಯಯನ ಮಾಡಬೇಕು. ಅವರ ವಿಚಾರಧಾರೆಗಳನ್ನ ಯುವಮನಸ್ಸುಗಳು ಅರಿತುಕೊಂಡು ಇತರರಿಗೆ ಜಾಗೃತಿ ಮೂಡಿಸಬೇಕು ಎಂದರು.

ಭಾರತದ ಪಾಲಿಗೆ ಸಂವಿಧಾನವೇ ಧರ್ಮ, ಸಂವಿಧಾನ ಪುಸ್ತಕವೇ ಧರ್ಮಗ್ರಂಥ. ಸಂವಿಧಾನ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಧರ್ಮಗಳ ಗ್ರಂಥಗಳಿಲ್ಲದೆ ನಾವು ಬದುಕಬಹುದು ಆದರೆ ಸಂವಿಧಾನ ಇಲ್ಲದೆ ಬದುಕಲು ಆಗುವುದಿಲ್ಲ. ದೇಶದ ಪ್ರತಿಯೊಬ್ಬನಿಗೂ ಮೂಲಭೂತ ಹಕ್ಕುಗಳಾಗಿ ಸ್ವಾತಂತ್ರ್ಯ, ಸಮಾನತೆ, ಶೋಷಣೆ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ನೀಡಲಾಗಿದೆ. ಇಲ್ಲಿ ಯಾರೊಬ್ಬರೂ ಕೀಳಲ್ಲ, ಮೇಲೂ ಅಲ್ಲ ಎಂದರು.

ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಡಿ.17ರ ಭಾನುವಾರ ಬೆಳಗ್ಗೆ 11ಕ್ಕೆ ದೊಡ್ಡಬಳ್ಳಾಪುರ ನಗರದ ಕೆಎಸ್ ಆರ್ ಟಿಸಿ ಡಿಪೋ ಮುಂಭಾಗದಲ್ಲಿರುವ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು‌ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಮುಖಂಡ ಹೇಮಂತ್ ಕುಮಾರ್.ಎಂ ಹೇಳಿದರು.

ವಿದ್ಯಾರ್ಥಿ‌ ಹಾಗೂ ಯುವಜನರಿಗೆ ಸಂವಿಧಾನದ ಮಹತ್ವ ಮತ್ತು ಅನಿವಾರ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನ ಆಯೋಜನೆ ಮಾಡಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೊಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

 ನಿಬಂದನೆಗಳು: 

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವವರು ನೋಂದಣಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಗಳನ್ನು ಮುಂಚಿತವಾಗಿ ವಾಟ್ಸಾಪ್ ಮೂಲಕ ಕಳುಹಿಸಬೇಕು.

ಸ್ಪರ್ಧೆಯಲ್ಲಿ ಭಾಗವಹಿಸಲು ಬರುವಾಗ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಖಡ್ಡಾಯವಾಗಿ ತರಬೇಕು.

ಬರಹ ಸ್ಪಷ್ಟ ಮತ್ತು ತೀಕ್ಷವಾಗಿರಬೇಕು, ವಿಷಯದ ಕುರಿತು 5 ಪುಟಗಳು ಮೀರದಂತೆ ಪ್ರಬಂಧ ಬರೆಯಬೇಕು.

ಆಸಕ್ತರು ಮೊದಲೇ ಕರೆಮಾಡಿ ತಮ್ಮ ಹೆಸರುಗಳನ್ನು ಡಿ.15ರೊಳಗಾಗಿ ನೋಂದಾಯಿಸಿಕೊಳ್ಳಬೇಕು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಡಿ.27 ರಂದು ನಡೆಯುವ ಸಂಘಟನೆಯ ಜಿಲ್ಲಾ ಸಮ್ಮೇಳನದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.

ಪ್ರಥಮ ಬಹುಮಾನ: 10000, ದ್ವಿತಿಯ ಬಹುಮಾನ: 5000, ತೃತಿಯ ಬಹುಮಾನ: 3000 ನೀಡಲಾಗುವುದು.ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸಮಾದಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ನೊಂದಣಿಗಾಗಿ 9986355926 ಸಂಖ್ಯೆಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9900735150, 9845076730, 9449463866, 9535418449, 7975325014, 9620649680, 9986573503

ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ನೋಂದಣಿಗಾಗಿ ಈ ಕೆಳಗಿನ ಲಿಂಕ್ ಬಳಸಿ

https://forms.gle/wBUDUegUx6Sx6fSX7

ಈ ವೇಳೆ ವರ್ಷ, ಅಪ್ಪುರಾಜ್, ಮಾನಸ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

7 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

22 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago