ಡಿ.17ಕ್ಕೆ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಪ್ರತಿಯೊಬ್ಬರಿಗೂ ಭಾರತ ಸಂವಿಧಾನ‌ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅರಿವು ಇರಲೇಬೇಕು. ಈ ನಿಟ್ಟಿನಲ್ಲಿ ಸಂವಿಧಾನದ ಆಶಯಗಳು, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳು ಪ್ರತಿಯೊಂದು ಮನೆಮನೆಗೂ ತಲುಪಿಸುವ ಕೆಲಸ ನಿರಂತರವಾಗಿ ನಾವೆಲ್ಲರೂ ಮಾಡಬೇಕಾಗಿದೆ ಎಂದು ದಲಿತ ಮುಖಂಡ‌ ರಾಜು ಸಣ್ಣಕ್ಕಿ ಹೇಳಿದರು.

ಈ ಕುರಿತು ನಗರದ ಪ್ರವಾಸ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನಿನ ಅರಿವು ಇದ್ದರೆ ಅನ್ಯಾಯ, ಮೋಸ, ದಬ್ಬಾಳಿಕೆ‌ ಸೇರಿದಂತೆ ಇತರೆ ತೊಂದರೆಗಳಿಂದ ಪಾರಾಗಬಹುದು ಎಂದರು.

ನಂತರ ವಿದ್ಯಾರ್ಥಿನಿ ನಂದಿನಿ ಮಾತನಾಡಿ, ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಆಳವಾಗಿ ಅಧ್ಯಯನ ಮಾಡಬೇಕು. ಅವರ ವಿಚಾರಧಾರೆಗಳನ್ನ ಯುವಮನಸ್ಸುಗಳು ಅರಿತುಕೊಂಡು ಇತರರಿಗೆ ಜಾಗೃತಿ ಮೂಡಿಸಬೇಕು ಎಂದರು.

ಭಾರತದ ಪಾಲಿಗೆ ಸಂವಿಧಾನವೇ ಧರ್ಮ, ಸಂವಿಧಾನ ಪುಸ್ತಕವೇ ಧರ್ಮಗ್ರಂಥ. ಸಂವಿಧಾನ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಧರ್ಮಗಳ ಗ್ರಂಥಗಳಿಲ್ಲದೆ ನಾವು ಬದುಕಬಹುದು ಆದರೆ ಸಂವಿಧಾನ ಇಲ್ಲದೆ ಬದುಕಲು ಆಗುವುದಿಲ್ಲ. ದೇಶದ ಪ್ರತಿಯೊಬ್ಬನಿಗೂ ಮೂಲಭೂತ ಹಕ್ಕುಗಳಾಗಿ ಸ್ವಾತಂತ್ರ್ಯ, ಸಮಾನತೆ, ಶೋಷಣೆ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ನೀಡಲಾಗಿದೆ. ಇಲ್ಲಿ ಯಾರೊಬ್ಬರೂ ಕೀಳಲ್ಲ, ಮೇಲೂ ಅಲ್ಲ ಎಂದರು.

ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಡಿ.17ರ ಭಾನುವಾರ ಬೆಳಗ್ಗೆ 11ಕ್ಕೆ ದೊಡ್ಡಬಳ್ಳಾಪುರ ನಗರದ ಕೆಎಸ್ ಆರ್ ಟಿಸಿ ಡಿಪೋ ಮುಂಭಾಗದಲ್ಲಿರುವ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು‌ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಮುಖಂಡ ಹೇಮಂತ್ ಕುಮಾರ್.ಎಂ ಹೇಳಿದರು.

ವಿದ್ಯಾರ್ಥಿ‌ ಹಾಗೂ ಯುವಜನರಿಗೆ ಸಂವಿಧಾನದ ಮಹತ್ವ ಮತ್ತು ಅನಿವಾರ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನ ಆಯೋಜನೆ ಮಾಡಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೊಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

 ನಿಬಂದನೆಗಳು: 

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವವರು ನೋಂದಣಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಗಳನ್ನು ಮುಂಚಿತವಾಗಿ ವಾಟ್ಸಾಪ್ ಮೂಲಕ ಕಳುಹಿಸಬೇಕು.

ಸ್ಪರ್ಧೆಯಲ್ಲಿ ಭಾಗವಹಿಸಲು ಬರುವಾಗ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಖಡ್ಡಾಯವಾಗಿ ತರಬೇಕು.

ಬರಹ ಸ್ಪಷ್ಟ ಮತ್ತು ತೀಕ್ಷವಾಗಿರಬೇಕು, ವಿಷಯದ ಕುರಿತು 5 ಪುಟಗಳು ಮೀರದಂತೆ ಪ್ರಬಂಧ ಬರೆಯಬೇಕು.

ಆಸಕ್ತರು ಮೊದಲೇ ಕರೆಮಾಡಿ ತಮ್ಮ ಹೆಸರುಗಳನ್ನು ಡಿ.15ರೊಳಗಾಗಿ ನೋಂದಾಯಿಸಿಕೊಳ್ಳಬೇಕು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಡಿ.27 ರಂದು ನಡೆಯುವ ಸಂಘಟನೆಯ ಜಿಲ್ಲಾ ಸಮ್ಮೇಳನದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.

ಪ್ರಥಮ ಬಹುಮಾನ: 10000, ದ್ವಿತಿಯ ಬಹುಮಾನ: 5000, ತೃತಿಯ ಬಹುಮಾನ: 3000 ನೀಡಲಾಗುವುದು.ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸಮಾದಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ನೊಂದಣಿಗಾಗಿ 9986355926 ಸಂಖ್ಯೆಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9900735150, 9845076730, 9449463866, 9535418449, 7975325014, 9620649680, 9986573503

ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ನೋಂದಣಿಗಾಗಿ ಈ ಕೆಳಗಿನ ಲಿಂಕ್ ಬಳಸಿ

https://forms.gle/wBUDUegUx6Sx6fSX7

ಈ ವೇಳೆ ವರ್ಷ, ಅಪ್ಪುರಾಜ್, ಮಾನಸ ಉಪಸ್ಥಿತರಿದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

10 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

13 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago