ಡಿ.19 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ- ಶಾಸಕ ಧೀರಜ್ ಮುನಿರಾಜು

ಡಿಸೆಂಬರ್ 19 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇಳದಲ್ಲಿ ವಿವಿಧ ಪ್ರತಿಷ್ಠಿತ ಕಂಪನಿ, ಕೈಗಾರಿಕಾ ಘಟಕ ಮತ್ತು ಗಾರ್ಮೆಂಟ್ಸ್ ಭಾಗವಹಿಸಲಿವೆ.ಯುವನಿಧಿ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಎಸ್ ಎಸ್ ಎಲ್ ಸಿ, ಡಿಪ್ಲೋಮಾ, ಐಟಿಐ, ಪಿಯುಸಿ, ಪದವಿ, ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅನಕ್ಷರಸ್ಥರು ಮತ್ತು ವಿಶೇಷಚೇತನರು ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಕಾರ್ಖಾನೆಗಳ ಉಪನಿರ್ದೇಶಕರಾದ ಎಂ.ಎ. ಸೋಮಶೇಖರ್, ಜಿಲ್ಲಾ ಕೌಶಲ್ಯ ಅಧಿಕಾರಿ ಜಗನ್ನಾಥ್, ದೊಡ್ಡಬಳ್ಳಾಪುರ ಕೈಗಾರಿಕಾ ಸಂಸ್ಥೆ ಅಧ್ಯಕ್ಷರಾದ ಅಂಜನೇಯಲು, ದೊಡ್ಡಬಳ್ಳಾಪುರ ಪೌರಾಯುಕ್ತ ಅಧಿಕಾರಿ ಕಾರ್ತಿಕ್ , ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ದೊಡ್ಡಬಳ್ಳಾಪುರ ಇಒ ಮಂಜುನಾಥ್, ಕಾರ್ಖಾನೆ ಮತ್ತು ಗಾರ್ಮೆಂಟ್ಸ್ ನ ಮುಖ್ಯಸ್ಥರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

4 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

6 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

9 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago