ಡಿ.25ಕ್ಕೆ ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ: ಡಿ10 ರಿಂದ 18ರವರೆಗೆ ಭಾರೀ ದನಗಳ ಜಾತ್ರೆ: ಸುಂಕ ರಹಿತ ಜಾತ್ರೆ ನಡೆಸಲು ತೀರ್ಮಾನ

ಶ್ರೀ ಘಾಟಿ ಕ್ಷೇತ್ರದಲ್ಲಿ ಹದಿನಾರು ಕೋಟಿ ರೂ. ವೆಚ್ಚದಲ್ಲಿ 2,000 ಭಕ್ತಾದಿಗಳು ಒಂದೇ ಸಮಯದಲ್ಲಿ ಕುಳಿತು ಊಟ ಮಾಡುವಂತಹ ದಾಸೋಹ ಭವನ ನಿರ್ಮಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಕ್ಷೇತ್ರ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರತಿ ವರ್ಷ ಸುಮಾರು 25 ಲಕ್ಷಕ್ಕಿಂತ ಹೆಚ್ಚಿನ ಭಕ್ತರು ಬರುತ್ತಾರೆ. ಸುಸಜ್ಜಿತ ಅನ್ನ ಸಂತರ್ಪಣೆ ಸೌಲಭ್ಯ ಭಕ್ತರಿಗೆ ಒದಗಿಸುವುದು ಮುಖ್ಯ. ಹಾಗಾಗಿ ದಾಸೋಹ ಭವನ ನಿರ್ಮಿಸಲಾಗುತ್ತಿದ್ದು ದಾಸೋಹ ಭವನ ಮುಂಭಾಗವು ಹೊಯ್ಸಳ ಶೈಲಿಯಿಂರ ಕೂಡಿರಲಿದೆ ಎಂದರು.

ರಥೋತ್ಸವ ಸಂದರ್ಭದಲ್ಲಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ರಥ ಬೀದಿ ನಿರ್ಮಿಸಲಾಗುವುದು. ದೇವಾಲಯದ ಸುತ್ತಲೂ ಕಾಂಕ್ರೀಟ್ ರಸ್ತೆ, ಶೌಚಾಲಯ ವ್ಯವಸ್ಥೆ ಹಾಗೂ ಒಂದೂವರೆ ಕೋಟಿ ವೆಚ್ಚದಲ್ಲಿ ಅತಿಥಿ ಗೃಹವನ್ನು ಅಭಿವೃದ್ಧಿ ಮಾಡಲಾಗುತ್ತದೆ. ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಶುದ್ಧ ತುಪ್ಪದಿಂದ ಮಾಡಿದ ಲಡ್ಡುವನ್ನು ಪ್ರಸಾದವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆ ಇಂದು ನಡೆದ ಸಭೆಯಲ್ಲಿ 29 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೈಗೊಳ್ಳಲು ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

*ಡಿಸೆಂಬರ್ 25 ಕ್ಕೆ ಬ್ರಹ್ಮರಥೋತ್ಸವ*
ಶ್ರೀ ಘಾಟಿ ಸುಬ್ರಮಣ್ಯರವರ ಬ್ರಹ್ಮರಥೋತ್ಸವ ಡಿಸೆಂಬರ್ 25 ರಂದು ನಡೆಯಲಿದೆ. ಈ ಬಾರಿ ವಿಶೇಷವಾಗಿ ಪುಷ್ಪಲಂಕಾರ ದೀಪ ಅಲಂಕಾರಗಳಿರುತ್ತದೆ. ಭಕ್ತಾದಿಗಳ ಅನುಕೂಲಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕ್ಯೂಲೈನ್ ವ್ಯವಸ್ಥೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗುವುದು.

*ಸುಂಕ ರಹಿತ ಜಾತ್ರೆ*
ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಗರ್ಭಿಣಿ ಬಾಣಂತಿಯರಿಗೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

*ಡಿ.10 ರಿಂದ 18 ವರೆಗೆ ರಾಸುಗಳ ಜಾತ್ರೆ*
ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ ರಾಸುಗಳ ಜಾತ್ರೆ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುವುದು ಎಂದರು.

*ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ* ಅವರು ಮಾತನಾಡಿ, ಘಾಟಿ ಕ್ಷೇತ್ರ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದೆ. ಕ್ಷೇತ್ರ ಅಭಿವೃದ್ಧಿಗೆ 100 ಎಕರೆ ಜಾಗದ ಅವಶ್ಯಕತೆ ಇದೆ. ಸದ್ಯಕ್ಕೆ 50 ಎಕರೆ ಜಾಗ ಬೇಕಾಗಿದ್ದು 20 ಎಕರೆ ಸರ್ಕಾರಿ ಜಮೀನು ಇದ್ದು, ಇನ್ನು 30 ಎಕರೆ ಜಾಗ ಹುಡುಕಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಘಾಟಿ ಕ್ಷೇತ್ರದಲ್ಲಿ ಸುಸಜ್ಜಿತ ಅನ್ನಸಂತರ್ಪಣೆ ಕಟ್ಟಡ, ಮಾಕಳಿಯಿಂದ ಕಂಟನಕುಂಟೆ ಮಾರ್ಗವಾಗಿ ಘಾಟಿಯ ವರೆಗೆ ರಸ್ತೆ ಅಭಿವೃದ್ಧಿ, ಅತಿಥಿ ಗೃಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಭಕ್ತಾದಿಗಳ ಹಿತ ದೃಷ್ಟಿಯಿಂದ ಸುಂಕ ರಹಿತ ಜಾತ್ರೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ಶರತ್, ಜಿಲ್ಲಾಧಿಕಾರಿ ಎಬಿ ಬಸವರಾಜು, ಎಡಿಸಿ ಸೈಯಿದಾ ಆಯಿಷಾ, ಘಾಟಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು, ಸಮಿತಿ ಸದಸ್ಯರು, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

6 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

7 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

8 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

8 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

12 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

20 hours ago