ಡಿ.25 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ- ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ದೊಡ್ಡಬಳ್ಳಾಪುರದ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ. 25 ರಂದು ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಶ್ರಮ ವಹಿಸಬೇಕು ಎಂದರು.

ರಾಸುಗಳ ಜಾತ್ರೆಯು 10 ರಂದು ಆರಂಭವಾಗಲಿದ್ದು ವಿವಿಧ ಭಾಗಗಳಿಂದ ಸಾಕಷ್ಟು ರೈತರು, ಜಾನುವಾರುಗಳು ಆಗಮಿಸಲಿವೆ. ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಸೂಚನಾ ಫಲಕ ಅಳವಡಿಸುವ ಮೂಲಕ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸಬೇಕು. ಬ್ರಹ್ಮ ರಥೋತ್ಸವ ದಿನ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ. ಸಾರ್ವಜನಿಕರು ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ ತೆರಳಲು ಹಾಗೂ ಮರಳಲು ಉಚಿತ ವಾಹನ ವ್ಯವಸ್ಥೆ ಮಾಡಿ ಎಂದರು.

ಸಾರ್ವಜನಿಕರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಪೂರೈಸಿ ಹಾಗೂ ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯಗಳನ್ನು ಒದಗಿಸಿ ಎಂದು
ಘಾಟಿ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದರು.

ದೇವಾಲಯದ ಸುತ್ತಮುತ್ತಲೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ನಗರಸಭೆಯಿಂದ ಪೌರಕಾರ್ಮಿಕರನ್ನು ಹೆಚ್ಚುವರಿಯಾಗಿ ನೇಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು. ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರಗಳು ಹಾಗೂ ಬೈಕ್ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೊಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಾತ್ರಾ ಮಹೋತ್ಸವದಲ್ಲಿ ಸೂಕ್ತ ಬಂದೋಬಸ್ತ್, ಭಧ್ರತೆ ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

*ಅನಧಿಕೃತ ಜಾಹಿರಾತು ಫಲಕ, ಫುಟ್ ಪಾತ್ ಅಂಗಡಿಗಳು ತೆರವಿಗೆ ಸೂಚನೆ*

ಮಾಕಳಿ ಇಂದ ಘಾಟಿ ರಸ್ತೆಯ ವರೆಗೆ, ಕಂಟನಕುಂಟೆ ಮಾರ್ಗವಾಗಿ ಅನಧಿಕೃತವಾಗಿ ಜಾಹೀರಾತು ಫಲಕಗಳು ಅಳವಡಿಸಿರುವುದರಿಂದ ವಾಹನ ಓಡಾಟಕ್ಕೆ ತೊಂದರೆ ಆಗಲಿದ್ದು ತೆರವುಗೊಳಿಸಲು ಸೂಚಿಸಿದರು. ಜೊತೆಗೆ ದೇವಾಲಯದ ಸುತ್ತಲೂ ಫೂಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವು ಗೊಳಿಸಿ ಅವರಿಗೆ ಪರ್ಯಾಯ ಜಾಗ ಗುರುತಿಸಿ ಅಲ್ಲಿ ಅಂಗಡಿ ಮಳಿಗೆಗಳ ಸ್ಥಾಪಿಸಲು ಅನುಮತಿ ನೀಡಿ ಎಂದರು.

*ಸ್ಥಳೀಯ ಕಲಾವಿದರಿಗೆ ಆದ್ಯತೆ

ಬ್ರಹ್ಮರಥೋತ್ಸವದ ಡಿಸೆಂಬರ್ 24, 25 ರಂದು ಹಾಗೂ ರಾಸುಗಳ ಜಾತ್ರಾ ಸಮಯದಲ್ಲಿ ಒಂದು ದಿನ ಒಟ್ಟು ಮೂರು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲು ತೀರ್ಮಾನಿಸಲಾಗಿದ್ದು. ಜಿಲ್ಲೆಯ ನಾಲ್ಕು ತಾಲ್ಲೂಕಿನ ಸ್ಥಳೀಯ ಕಲಾವಿದರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ. ಸ್ಥಳೀಯ ಕಲಾವಿದರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಘಾಟಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದರು.

ಸಭೆಯಲ್ಲಿ ಸಿಇಒ ಡಾ.ಕೆ.ಎನ್ ಅನುರಾಧ, ಎಸಿ ದುರ್ಗ ಶ್ರಿ, ಎಎಸ್ಪಿ ನಾಗರಾಜ್, ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಇಒ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

2 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

15 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

16 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

18 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago