ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ- ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ಸಿದ್ಧತೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದೆ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು  ಮುಂದಾಗಿದ್ದೇವೆ ಎಂದರು.

ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಚೈತನ್ಯ ತುಂಬಲು  ಹಾಗೂ ತಾಲ್ಲೂಕಿನ ಸಮಸ್ಯೆಗಳ ಪರಿಹಾರಕ್ಕೆ ತಾಲ್ಲೂಕಿನ ಜನತೆಯ ಬೆಂಬಲಕ್ಕೆ ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಜೆಡಿಎಸ್ ಮುಖಂಡರಾದ ತ.ನಾ ಪ್ರಭುದೇವ್, ಎ.ನರಸಿಂಹಯ್ಯ, ಆನಂದ್, ಪ್ರವೀಣ್ ಶಾಂತಿನಗರ, ತಳವಾರ್ ನಾಗಣ್ಣ  ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

37 minutes ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

4 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

4 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

7 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

9 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

21 hours ago