Categories: ಕೋಲಾರ

ಡಿ.30ಕ್ಕೆ ಚನ್ನರಾಯಪಟ್ಟಣ ರೈತ ಹೋರಾಟಕ್ಕೆ 1000 ದಿನ: ಜಿಲ್ಲೆಯಿಂದ ರೈತರು ಭಾಗವಹಿಸಲು ನಿರ್ಧಾರ

ಕೋಲಾರ; ಡಿಸೆಂಬರ್ 30ಕ್ಕೆ ಸಾವಿರ ದಿನ ಪೂರ್ಣಗೊಳ್ಳುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನಾ ವಿರೋಧಿ ಹೋರಾಟದ ಪ್ರತಿಭಟನೆಗೆ ಕೋಲಾರ ಜಿಲ್ಲೆಯಿಂದ 200 ಜನ ರೈತರು ಭಾಗವಹಿಸಲು ಗಾಜಲದಿನ್ನೆ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ರೈತರ ಕೃಷಿ ಜಮೀನನ್ನು ಕೈಗಾರಿಕೆ, ರಸ್ತೆ, ನಿವೇಶನದ ಹೆಸರಿನಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತೇವೆಂದು ನಂತರ ಯಾವುದೇ ಕೈಗಾರಿಕೆಗಳನ್ನು ಮಾಡದೆ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡು, ಕೃಷಿಯನ್ನೇ ನಂಬಿರುವ ರೈತರ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಸರ್ಕಾರಗಳ ವಿರುದ್ಧ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿಯನ್ನು ಸರ್ಕಾರ ಕೈಗಾರಿಕೆಗೆಂದು ಭೂಸ್ವಾಧೀನ ಮಾಡಿಕೊಂಡು ಅದನ್ನೇ ನಂಬಿರುವ ರೈತರು ನಮ್ಮ ಪ್ರಾಣವನ್ನು ಬೇಕಾದರೂ ನೀಡುತ್ತೇವೆ. ನೀವು ಕೋಟಿ ಕೊಟ್ಟರೂ ನಮ್ಮ ಕೃಷಿ ಭೂಮಿಯನ್ನು ಬಿಡುವುದಿಲ್ಲ ಎಂದು ಹಠ ಹಿಡಿದಿರುವ ರೈತರ ಭೂಸ್ವಾಧೀನ ವಿರೋಧಿ ವೇದಿಕೆಗೆ ಡಿಸೆಂಬರ ೩೦ರಂದು 1000 ದಿನ ಪೂರೈಕೆ ಮಾಡಿ ದೆಹಲಿಯ ಹೋರಾಟವನ್ನು ಹಿಂದಿಕ್ಕುತ್ತಿದೆ. ಇಂತಹ ಐತಿಹಾಸಿಕ ಹೋರಾಟಕ್ಕೆ ಕೋಲಾರ ಜಿಲ್ಲೆಯ ರೈತರು ಸಂಪೂರ್ಣ ಬೆಂಬಲ ಘೋಷಿಸುವ ನಿರ್ಧಾರ ಮಾಡಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳು ನಂತರ ರೈತರನ್ನು ಮರೆತು ಬಹುರಾಷ್ಟ್ರೀಯ ಕಂಪನಿಗಳ ಗುಲಾಮರಂತೆ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ರೈತರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡುವ ಜೊತೆಗೆ ರೈತರ ಹೋರಾಟವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ನ್ಯಾಯವೇ. ಅಲ್ಲಿನ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸರ್ಕಾರದ ಮೇಲೆ ಒತ್ತಡ ಹಾಕಿ ರೈತರ ನ್ಯಾಯಯುತ ಕೃಷಿ ಭೂಮಿಯನ್ನು ಉಳಿಸಿಕೊಳ್ಳಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.

ಡಿಸೆಂಬರ್ 30ರಂದು ನಡೆಯುವ ರೈತರ ನಡಿಗೆ ಡಿಸಿ ಕಚೇರಿ ಕಡೆಗೆ ಹೋರಾಟದ ಮೂಲಕ ರೈತರನ್ನು ರಕ್ಷಣೆ ಮಾಡಲು ಕೃಷಿ ಭೂಮಿಯನ್ನು ಉಳಿಸುವ ಜೊತೆಗೆ ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಹೋರಾಟಕ್ಕೆ ಬೆಂಬಲವಾಗಿ ಜಿಲ್ಲೆಯ 200 ರೈತರು ಭಾಗವಹಿಸಿ ರೈತಕುಲಕ್ಕೆ ದೇಶದ ಯಾವುದೇ ಭಾಗದಲ್ಲೂ ಅನ್ಯಾಯವಾದರೆ ಅಲ್ಲಿ ಕೋಲಾರ ಜಿಲ್ಲೆಯ ರೈತರು ಇರುತ್ತಾರೆಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ತರ‍್ನಹಳ್ಳಿ ಆಂಜಿನಪ್ಪ, ಯಲ್ಲಣ್ಣ, ಹರೀಶ್, ಸುಪ್ರೀಂ ಚಲ, ಫಾರೂಖ್ ಪಾಷ, ರತ್ನಮ್ಮ, ಶೈಲಜ, ಗೌರಮ್ಮ, ಮುನಿವೆಂಕಟಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

7 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

9 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

13 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

15 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

18 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago