ಕೋಲಾರ; ಡಿಸೆಂಬರ್ 30ಕ್ಕೆ ಸಾವಿರ ದಿನ ಪೂರ್ಣಗೊಳ್ಳುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನಾ ವಿರೋಧಿ ಹೋರಾಟದ ಪ್ರತಿಭಟನೆಗೆ ಕೋಲಾರ ಜಿಲ್ಲೆಯಿಂದ 200 ಜನ ರೈತರು ಭಾಗವಹಿಸಲು ಗಾಜಲದಿನ್ನೆ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ರೈತರ ಕೃಷಿ ಜಮೀನನ್ನು ಕೈಗಾರಿಕೆ, ರಸ್ತೆ, ನಿವೇಶನದ ಹೆಸರಿನಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತೇವೆಂದು ನಂತರ ಯಾವುದೇ ಕೈಗಾರಿಕೆಗಳನ್ನು ಮಾಡದೆ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡು, ಕೃಷಿಯನ್ನೇ ನಂಬಿರುವ ರೈತರ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಸರ್ಕಾರಗಳ ವಿರುದ್ಧ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.
ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿಯನ್ನು ಸರ್ಕಾರ ಕೈಗಾರಿಕೆಗೆಂದು ಭೂಸ್ವಾಧೀನ ಮಾಡಿಕೊಂಡು ಅದನ್ನೇ ನಂಬಿರುವ ರೈತರು ನಮ್ಮ ಪ್ರಾಣವನ್ನು ಬೇಕಾದರೂ ನೀಡುತ್ತೇವೆ. ನೀವು ಕೋಟಿ ಕೊಟ್ಟರೂ ನಮ್ಮ ಕೃಷಿ ಭೂಮಿಯನ್ನು ಬಿಡುವುದಿಲ್ಲ ಎಂದು ಹಠ ಹಿಡಿದಿರುವ ರೈತರ ಭೂಸ್ವಾಧೀನ ವಿರೋಧಿ ವೇದಿಕೆಗೆ ಡಿಸೆಂಬರ ೩೦ರಂದು 1000 ದಿನ ಪೂರೈಕೆ ಮಾಡಿ ದೆಹಲಿಯ ಹೋರಾಟವನ್ನು ಹಿಂದಿಕ್ಕುತ್ತಿದೆ. ಇಂತಹ ಐತಿಹಾಸಿಕ ಹೋರಾಟಕ್ಕೆ ಕೋಲಾರ ಜಿಲ್ಲೆಯ ರೈತರು ಸಂಪೂರ್ಣ ಬೆಂಬಲ ಘೋಷಿಸುವ ನಿರ್ಧಾರ ಮಾಡಲಾಗಿದೆ ಎಂದರು.
ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳು ನಂತರ ರೈತರನ್ನು ಮರೆತು ಬಹುರಾಷ್ಟ್ರೀಯ ಕಂಪನಿಗಳ ಗುಲಾಮರಂತೆ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ರೈತರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡುವ ಜೊತೆಗೆ ರೈತರ ಹೋರಾಟವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ನ್ಯಾಯವೇ. ಅಲ್ಲಿನ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸರ್ಕಾರದ ಮೇಲೆ ಒತ್ತಡ ಹಾಕಿ ರೈತರ ನ್ಯಾಯಯುತ ಕೃಷಿ ಭೂಮಿಯನ್ನು ಉಳಿಸಿಕೊಳ್ಳಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.
ಡಿಸೆಂಬರ್ 30ರಂದು ನಡೆಯುವ ರೈತರ ನಡಿಗೆ ಡಿಸಿ ಕಚೇರಿ ಕಡೆಗೆ ಹೋರಾಟದ ಮೂಲಕ ರೈತರನ್ನು ರಕ್ಷಣೆ ಮಾಡಲು ಕೃಷಿ ಭೂಮಿಯನ್ನು ಉಳಿಸುವ ಜೊತೆಗೆ ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಹೋರಾಟಕ್ಕೆ ಬೆಂಬಲವಾಗಿ ಜಿಲ್ಲೆಯ 200 ರೈತರು ಭಾಗವಹಿಸಿ ರೈತಕುಲಕ್ಕೆ ದೇಶದ ಯಾವುದೇ ಭಾಗದಲ್ಲೂ ಅನ್ಯಾಯವಾದರೆ ಅಲ್ಲಿ ಕೋಲಾರ ಜಿಲ್ಲೆಯ ರೈತರು ಇರುತ್ತಾರೆಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ತರ್ನಹಳ್ಳಿ ಆಂಜಿನಪ್ಪ, ಯಲ್ಲಣ್ಣ, ಹರೀಶ್, ಸುಪ್ರೀಂ ಚಲ, ಫಾರೂಖ್ ಪಾಷ, ರತ್ನಮ್ಮ, ಶೈಲಜ, ಗೌರಮ್ಮ, ಮುನಿವೆಂಕಟಮ್ಮ ಮುಂತಾದವರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…