Categories: ಕೋಲಾರ

ಡಿ.30ಕ್ಕೆ ಚನ್ನರಾಯಪಟ್ಟಣ ರೈತ ಹೋರಾಟಕ್ಕೆ 1000 ದಿನ: ಜಿಲ್ಲೆಯಿಂದ ರೈತರು ಭಾಗವಹಿಸಲು ನಿರ್ಧಾರ

ಕೋಲಾರ; ಡಿಸೆಂಬರ್ 30ಕ್ಕೆ ಸಾವಿರ ದಿನ ಪೂರ್ಣಗೊಳ್ಳುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನಾ ವಿರೋಧಿ ಹೋರಾಟದ ಪ್ರತಿಭಟನೆಗೆ ಕೋಲಾರ ಜಿಲ್ಲೆಯಿಂದ 200 ಜನ ರೈತರು ಭಾಗವಹಿಸಲು ಗಾಜಲದಿನ್ನೆ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ರೈತರ ಕೃಷಿ ಜಮೀನನ್ನು ಕೈಗಾರಿಕೆ, ರಸ್ತೆ, ನಿವೇಶನದ ಹೆಸರಿನಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತೇವೆಂದು ನಂತರ ಯಾವುದೇ ಕೈಗಾರಿಕೆಗಳನ್ನು ಮಾಡದೆ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡು, ಕೃಷಿಯನ್ನೇ ನಂಬಿರುವ ರೈತರ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಸರ್ಕಾರಗಳ ವಿರುದ್ಧ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿಯನ್ನು ಸರ್ಕಾರ ಕೈಗಾರಿಕೆಗೆಂದು ಭೂಸ್ವಾಧೀನ ಮಾಡಿಕೊಂಡು ಅದನ್ನೇ ನಂಬಿರುವ ರೈತರು ನಮ್ಮ ಪ್ರಾಣವನ್ನು ಬೇಕಾದರೂ ನೀಡುತ್ತೇವೆ. ನೀವು ಕೋಟಿ ಕೊಟ್ಟರೂ ನಮ್ಮ ಕೃಷಿ ಭೂಮಿಯನ್ನು ಬಿಡುವುದಿಲ್ಲ ಎಂದು ಹಠ ಹಿಡಿದಿರುವ ರೈತರ ಭೂಸ್ವಾಧೀನ ವಿರೋಧಿ ವೇದಿಕೆಗೆ ಡಿಸೆಂಬರ ೩೦ರಂದು 1000 ದಿನ ಪೂರೈಕೆ ಮಾಡಿ ದೆಹಲಿಯ ಹೋರಾಟವನ್ನು ಹಿಂದಿಕ್ಕುತ್ತಿದೆ. ಇಂತಹ ಐತಿಹಾಸಿಕ ಹೋರಾಟಕ್ಕೆ ಕೋಲಾರ ಜಿಲ್ಲೆಯ ರೈತರು ಸಂಪೂರ್ಣ ಬೆಂಬಲ ಘೋಷಿಸುವ ನಿರ್ಧಾರ ಮಾಡಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳು ನಂತರ ರೈತರನ್ನು ಮರೆತು ಬಹುರಾಷ್ಟ್ರೀಯ ಕಂಪನಿಗಳ ಗುಲಾಮರಂತೆ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ರೈತರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡುವ ಜೊತೆಗೆ ರೈತರ ಹೋರಾಟವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ನ್ಯಾಯವೇ. ಅಲ್ಲಿನ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸರ್ಕಾರದ ಮೇಲೆ ಒತ್ತಡ ಹಾಕಿ ರೈತರ ನ್ಯಾಯಯುತ ಕೃಷಿ ಭೂಮಿಯನ್ನು ಉಳಿಸಿಕೊಳ್ಳಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.

ಡಿಸೆಂಬರ್ 30ರಂದು ನಡೆಯುವ ರೈತರ ನಡಿಗೆ ಡಿಸಿ ಕಚೇರಿ ಕಡೆಗೆ ಹೋರಾಟದ ಮೂಲಕ ರೈತರನ್ನು ರಕ್ಷಣೆ ಮಾಡಲು ಕೃಷಿ ಭೂಮಿಯನ್ನು ಉಳಿಸುವ ಜೊತೆಗೆ ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಹೋರಾಟಕ್ಕೆ ಬೆಂಬಲವಾಗಿ ಜಿಲ್ಲೆಯ 200 ರೈತರು ಭಾಗವಹಿಸಿ ರೈತಕುಲಕ್ಕೆ ದೇಶದ ಯಾವುದೇ ಭಾಗದಲ್ಲೂ ಅನ್ಯಾಯವಾದರೆ ಅಲ್ಲಿ ಕೋಲಾರ ಜಿಲ್ಲೆಯ ರೈತರು ಇರುತ್ತಾರೆಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ತರ‍್ನಹಳ್ಳಿ ಆಂಜಿನಪ್ಪ, ಯಲ್ಲಣ್ಣ, ಹರೀಶ್, ಸುಪ್ರೀಂ ಚಲ, ಫಾರೂಖ್ ಪಾಷ, ರತ್ನಮ್ಮ, ಶೈಲಜ, ಗೌರಮ್ಮ, ಮುನಿವೆಂಕಟಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

49 minutes ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

3 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

15 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

15 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

17 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

21 hours ago