Categories: ಕೋಲಾರ

ಡಿ.31 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಕೋಲಾರ: ನೌಕರರಿಗೆ ಪರಿಷ್ಕೃತ ವೇತನ ಜಾರಿ, ‌ವೇತನ ಹಿಂಬಾಕಿ ಹಾಗೂ ನಿಗಮಗಳಿಗೆ ಶಕ್ತಿ ಯೋಜನೆ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ಡಿ.31ರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್‌ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ‌ ಜಂಟಿ ಕ್ರಿಯಾ ಸಮಿತಿ ಮುಖಂಡರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಮುಖಂಡ ನಾರಾಯಣಸ್ವಾಮಿ, ‘ರಾಜ್ಯ ಸರ್ಕಾರವು ಸಾರಿಗೆ ನೌಕರರ 32 ಬೇಡಿಕೆಗಳನ್ನು ಈಡೇರಿಸಬೇಕಿದೆ. ಈ ಸಂಬಂಧ ಹಲವಾರು ಬಾರಿ ಮನವಿ ಮಾಡಿದರೂ ಸರ್ಕಾರ ಕ್ರಮ ವಹಿಸಿಲ್ಲ. ಸಾರಿಗೆ ಸಚಿವ ರಾಮಲಿಂಗಾರಡ್ಡಿ ಸ್ಪಂದಿಸಿಲ್ಲ. ಹೀಗಾಗಿ, ಅನಿವಾರ್ಯವಾಗಿ ಮುಷ್ಕರ ನಡೆಸಬೇಕಾಗಿದೆ. ಡಿ.31ರಿಂದ ಯಾವುದೇ ಸಾರಿಗೆ ಬಸ್‌ಗಳ ಸಂಚಾರ ಇರುವುದಿಲ್ಲ. ನಮ್ಮ ಸಮಸ್ಯೆ ಅರಿತು ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.

‘ಸಾರಿಗೆ ನೌಕರರು ಸರ್ಕಾರದ ಮಹಾತ್ವಕಾಂಕ್ಷಿ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಆದರೆ, ಸಾರಿಗೆ ನಿಗಮಗಳಿಗೆ ಆ ಹಣ ಬಿಡುಗಡೆ ಮಾಡಿಲ್ಲ’ ಎಂದರು.

ಕ್ರಿಯಾ ಸಮಿತಿಯ ಪದಾಧಿಕಾರಿ ಬಾಲಕೃಷ್ಣ ಮಾತನಾಡಿ, ‘2020 ರ ಜ. 1 ರಿಂದಲೇ ವೇತನ ಪರಿಷ್ಕರಣೆ ಆಗಿಬೇಕಿತ್ತು. ಆದರೆ, ಕೋವಿಡ್‌ ಕಾರಣ ಜಾರಿ ಆಗಲಿಲ್ಲ. 2024ರ ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಆಯಿತು. ಪರಿಷ್ಕರಣೆ ವೇತನ ಜಾರಿ ಜೊತೆಗೆ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು’ ಎಂದು ಒತ್ತಾಯಿಸಿದರು.

‘ಶಕ್ತಿ ಯೋಜನೆ ಜಾರಿಗೆ ಸಾರಿಗೆ ಸಿಬ್ಬಂದಿ ಶ್ರಮ ಅಪಾರ. ಆದರೆ, ನೌಕರರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈಗ ಕರೆದರೂ ನಾವು ಚರ್ಚೆಗೆ ಸಿದ್ಧವಿದ್ದೇವೆ. ಬೇಡಿಕೆ ಈಡೇರಿಸಿದರೆ ಮುಷ್ಕರ ವಾಪಸ್ ಪಡೆಯುತ್ತೇವೆ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಆರ್‌.ಪ್ರಸಾದ್‌ ಮಾತನಾಡಿ, ‘ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಡಿ.9 ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನಾ 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್‌ ನೀಡಿ ಗಮನಕ್ಕೆ ತಂದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಾರಿಗೆ ನೌಕರರ 2,900 ಕೋಟಿಯನ್ನು ಪಿಎಫ್‌ ರೂಪದಲ್ಲಿ ರಾಜ್ಯ ಸರ್ಕಾರವು ಸಂಬಳದಲ್ಲಿ ಕಡಿತ ಮಾಡಿದೆ. ನಾವು ಪಾವತಿಸಿದ ಹಣವನ್ನು ಸಾಲದ ರೂಪದಲ್ಲಿ ಕೊಡುವಂತೆ ಕೇಳಿದರೂ ನೀಡುತ್ತಿಲ್ಲ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ‘ಸಾರ್ವಜನಿಕರಿಗೆ ತೊಂದರೆ ಮಾಡುವ ಉದ್ದೇಶ ನಮಗಿಲ್ಲ. ಆದರೆ,‌ ನಮ್ಮ ಹೊಟ್ಟೆಗೆ ಇಲ್ಲವೆಂದ‌‌ ಮೇಲೆ ಏನು‌ ಮಾಡುವುದು? ಕುಟುಂಬದ ಪಾಡೇನು’ ಎಂದು ಪ್ರಶ್ನಿಸಿದರು.

‘ಈ ಬಾರಿ ಎಸ್ಮಾ ಜಾರಿ ಮಾಡಿದರೂ ಪರವಾಗಿಲ್ಲ. ನಾವು ಸಂಕಷ್ಟಕ್ಕೆ ‌ಸಿಲುಕಿದ್ದು, ನ್ಯಾಯಬೇಕಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗರಾಜ್, ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

3 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

6 hours ago

ಬಾಬಾ ಸಾಹೇಬರಿಗೊಂದು ಪತ್ರ……

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ........ 77 ವರ್ಷಗಳ ನಂತರ, ನೀವು…

9 hours ago

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

18 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

19 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

19 hours ago