Categories: ಕೋಲಾರ

ಡಿ.31 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಕೋಲಾರ: ನೌಕರರಿಗೆ ಪರಿಷ್ಕೃತ ವೇತನ ಜಾರಿ, ‌ವೇತನ ಹಿಂಬಾಕಿ ಹಾಗೂ ನಿಗಮಗಳಿಗೆ ಶಕ್ತಿ ಯೋಜನೆ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ಡಿ.31ರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್‌ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ‌ ಜಂಟಿ ಕ್ರಿಯಾ ಸಮಿತಿ ಮುಖಂಡರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಮುಖಂಡ ನಾರಾಯಣಸ್ವಾಮಿ, ‘ರಾಜ್ಯ ಸರ್ಕಾರವು ಸಾರಿಗೆ ನೌಕರರ 32 ಬೇಡಿಕೆಗಳನ್ನು ಈಡೇರಿಸಬೇಕಿದೆ. ಈ ಸಂಬಂಧ ಹಲವಾರು ಬಾರಿ ಮನವಿ ಮಾಡಿದರೂ ಸರ್ಕಾರ ಕ್ರಮ ವಹಿಸಿಲ್ಲ. ಸಾರಿಗೆ ಸಚಿವ ರಾಮಲಿಂಗಾರಡ್ಡಿ ಸ್ಪಂದಿಸಿಲ್ಲ. ಹೀಗಾಗಿ, ಅನಿವಾರ್ಯವಾಗಿ ಮುಷ್ಕರ ನಡೆಸಬೇಕಾಗಿದೆ. ಡಿ.31ರಿಂದ ಯಾವುದೇ ಸಾರಿಗೆ ಬಸ್‌ಗಳ ಸಂಚಾರ ಇರುವುದಿಲ್ಲ. ನಮ್ಮ ಸಮಸ್ಯೆ ಅರಿತು ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.

‘ಸಾರಿಗೆ ನೌಕರರು ಸರ್ಕಾರದ ಮಹಾತ್ವಕಾಂಕ್ಷಿ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಆದರೆ, ಸಾರಿಗೆ ನಿಗಮಗಳಿಗೆ ಆ ಹಣ ಬಿಡುಗಡೆ ಮಾಡಿಲ್ಲ’ ಎಂದರು.

ಕ್ರಿಯಾ ಸಮಿತಿಯ ಪದಾಧಿಕಾರಿ ಬಾಲಕೃಷ್ಣ ಮಾತನಾಡಿ, ‘2020 ರ ಜ. 1 ರಿಂದಲೇ ವೇತನ ಪರಿಷ್ಕರಣೆ ಆಗಿಬೇಕಿತ್ತು. ಆದರೆ, ಕೋವಿಡ್‌ ಕಾರಣ ಜಾರಿ ಆಗಲಿಲ್ಲ. 2024ರ ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಆಯಿತು. ಪರಿಷ್ಕರಣೆ ವೇತನ ಜಾರಿ ಜೊತೆಗೆ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು’ ಎಂದು ಒತ್ತಾಯಿಸಿದರು.

‘ಶಕ್ತಿ ಯೋಜನೆ ಜಾರಿಗೆ ಸಾರಿಗೆ ಸಿಬ್ಬಂದಿ ಶ್ರಮ ಅಪಾರ. ಆದರೆ, ನೌಕರರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈಗ ಕರೆದರೂ ನಾವು ಚರ್ಚೆಗೆ ಸಿದ್ಧವಿದ್ದೇವೆ. ಬೇಡಿಕೆ ಈಡೇರಿಸಿದರೆ ಮುಷ್ಕರ ವಾಪಸ್ ಪಡೆಯುತ್ತೇವೆ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಆರ್‌.ಪ್ರಸಾದ್‌ ಮಾತನಾಡಿ, ‘ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಡಿ.9 ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನಾ 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್‌ ನೀಡಿ ಗಮನಕ್ಕೆ ತಂದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಾರಿಗೆ ನೌಕರರ 2,900 ಕೋಟಿಯನ್ನು ಪಿಎಫ್‌ ರೂಪದಲ್ಲಿ ರಾಜ್ಯ ಸರ್ಕಾರವು ಸಂಬಳದಲ್ಲಿ ಕಡಿತ ಮಾಡಿದೆ. ನಾವು ಪಾವತಿಸಿದ ಹಣವನ್ನು ಸಾಲದ ರೂಪದಲ್ಲಿ ಕೊಡುವಂತೆ ಕೇಳಿದರೂ ನೀಡುತ್ತಿಲ್ಲ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ‘ಸಾರ್ವಜನಿಕರಿಗೆ ತೊಂದರೆ ಮಾಡುವ ಉದ್ದೇಶ ನಮಗಿಲ್ಲ. ಆದರೆ,‌ ನಮ್ಮ ಹೊಟ್ಟೆಗೆ ಇಲ್ಲವೆಂದ‌‌ ಮೇಲೆ ಏನು‌ ಮಾಡುವುದು? ಕುಟುಂಬದ ಪಾಡೇನು’ ಎಂದು ಪ್ರಶ್ನಿಸಿದರು.

‘ಈ ಬಾರಿ ಎಸ್ಮಾ ಜಾರಿ ಮಾಡಿದರೂ ಪರವಾಗಿಲ್ಲ. ನಾವು ಸಂಕಷ್ಟಕ್ಕೆ ‌ಸಿಲುಕಿದ್ದು, ನ್ಯಾಯಬೇಕಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗರಾಜ್, ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 hour ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago