Categories: ಕೋಲಾರ

ಡಿ.31 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಕೋಲಾರ: ನೌಕರರಿಗೆ ಪರಿಷ್ಕೃತ ವೇತನ ಜಾರಿ, ‌ವೇತನ ಹಿಂಬಾಕಿ ಹಾಗೂ ನಿಗಮಗಳಿಗೆ ಶಕ್ತಿ ಯೋಜನೆ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ಡಿ.31ರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್‌ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ‌ ಜಂಟಿ ಕ್ರಿಯಾ ಸಮಿತಿ ಮುಖಂಡರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಮುಖಂಡ ನಾರಾಯಣಸ್ವಾಮಿ, ‘ರಾಜ್ಯ ಸರ್ಕಾರವು ಸಾರಿಗೆ ನೌಕರರ 32 ಬೇಡಿಕೆಗಳನ್ನು ಈಡೇರಿಸಬೇಕಿದೆ. ಈ ಸಂಬಂಧ ಹಲವಾರು ಬಾರಿ ಮನವಿ ಮಾಡಿದರೂ ಸರ್ಕಾರ ಕ್ರಮ ವಹಿಸಿಲ್ಲ. ಸಾರಿಗೆ ಸಚಿವ ರಾಮಲಿಂಗಾರಡ್ಡಿ ಸ್ಪಂದಿಸಿಲ್ಲ. ಹೀಗಾಗಿ, ಅನಿವಾರ್ಯವಾಗಿ ಮುಷ್ಕರ ನಡೆಸಬೇಕಾಗಿದೆ. ಡಿ.31ರಿಂದ ಯಾವುದೇ ಸಾರಿಗೆ ಬಸ್‌ಗಳ ಸಂಚಾರ ಇರುವುದಿಲ್ಲ. ನಮ್ಮ ಸಮಸ್ಯೆ ಅರಿತು ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.

‘ಸಾರಿಗೆ ನೌಕರರು ಸರ್ಕಾರದ ಮಹಾತ್ವಕಾಂಕ್ಷಿ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಆದರೆ, ಸಾರಿಗೆ ನಿಗಮಗಳಿಗೆ ಆ ಹಣ ಬಿಡುಗಡೆ ಮಾಡಿಲ್ಲ’ ಎಂದರು.

ಕ್ರಿಯಾ ಸಮಿತಿಯ ಪದಾಧಿಕಾರಿ ಬಾಲಕೃಷ್ಣ ಮಾತನಾಡಿ, ‘2020 ರ ಜ. 1 ರಿಂದಲೇ ವೇತನ ಪರಿಷ್ಕರಣೆ ಆಗಿಬೇಕಿತ್ತು. ಆದರೆ, ಕೋವಿಡ್‌ ಕಾರಣ ಜಾರಿ ಆಗಲಿಲ್ಲ. 2024ರ ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಆಯಿತು. ಪರಿಷ್ಕರಣೆ ವೇತನ ಜಾರಿ ಜೊತೆಗೆ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು’ ಎಂದು ಒತ್ತಾಯಿಸಿದರು.

‘ಶಕ್ತಿ ಯೋಜನೆ ಜಾರಿಗೆ ಸಾರಿಗೆ ಸಿಬ್ಬಂದಿ ಶ್ರಮ ಅಪಾರ. ಆದರೆ, ನೌಕರರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈಗ ಕರೆದರೂ ನಾವು ಚರ್ಚೆಗೆ ಸಿದ್ಧವಿದ್ದೇವೆ. ಬೇಡಿಕೆ ಈಡೇರಿಸಿದರೆ ಮುಷ್ಕರ ವಾಪಸ್ ಪಡೆಯುತ್ತೇವೆ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಆರ್‌.ಪ್ರಸಾದ್‌ ಮಾತನಾಡಿ, ‘ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಡಿ.9 ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನಾ 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್‌ ನೀಡಿ ಗಮನಕ್ಕೆ ತಂದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಾರಿಗೆ ನೌಕರರ 2,900 ಕೋಟಿಯನ್ನು ಪಿಎಫ್‌ ರೂಪದಲ್ಲಿ ರಾಜ್ಯ ಸರ್ಕಾರವು ಸಂಬಳದಲ್ಲಿ ಕಡಿತ ಮಾಡಿದೆ. ನಾವು ಪಾವತಿಸಿದ ಹಣವನ್ನು ಸಾಲದ ರೂಪದಲ್ಲಿ ಕೊಡುವಂತೆ ಕೇಳಿದರೂ ನೀಡುತ್ತಿಲ್ಲ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ‘ಸಾರ್ವಜನಿಕರಿಗೆ ತೊಂದರೆ ಮಾಡುವ ಉದ್ದೇಶ ನಮಗಿಲ್ಲ. ಆದರೆ,‌ ನಮ್ಮ ಹೊಟ್ಟೆಗೆ ಇಲ್ಲವೆಂದ‌‌ ಮೇಲೆ ಏನು‌ ಮಾಡುವುದು? ಕುಟುಂಬದ ಪಾಡೇನು’ ಎಂದು ಪ್ರಶ್ನಿಸಿದರು.

‘ಈ ಬಾರಿ ಎಸ್ಮಾ ಜಾರಿ ಮಾಡಿದರೂ ಪರವಾಗಿಲ್ಲ. ನಾವು ಸಂಕಷ್ಟಕ್ಕೆ ‌ಸಿಲುಕಿದ್ದು, ನ್ಯಾಯಬೇಕಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗರಾಜ್, ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

6 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

23 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago