ಮಂಗಳೂರು: ನ.28: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…