ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್ಗೆ ಎಡೆಕುಂಟೆ ಜೋಡಿಸಿ ಹೊಲದಲ್ಲಿ ಕಳೆ ತೆಗೆಯುವ ಮೂಲಕ ಗಮನ ಸೆಳೆದಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯ ಮಧ್ಯೆ ಬೆಳೆದ ಕಳೆ ತೆಗೆಯಲು ಈ ವಿನೂತನ ಪ್ರಯೋಗ ಕೈಗೊಂಡಿದ್ದಾರೆ.
ಬಳಕೆಯಲ್ಲಿರದ ಹಳೆಯ ಸೈಕಲ್ಗೆ ಕಳೆ ತೆಗೆಯುವ ಕುಂಟೆಯನ್ನು ಅಳವಡಿಸಿ ಹೊಲದಲ್ಲಿ ಬಳಸುತ್ತಿದ್ದಾರೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಾಗೂ ಸುಲಭವಾಗಿ ಕಳೆ ನಿಯಂತ್ರಣ ಮಾಡಬಹುದು ಎಂದು ರೈತರು ತಿಳಿಸಿದ್ದಾರೆ. ಎತ್ತುಗಳು ಸುಲಭವಾಗಿ ಸಿಗುತ್ತಿಲ್ಲ. ಸಿಕ್ಕರೂ ಬಾಡಿಗೆ ದುಬಾರಿಯಾಗಿದೆ. ಇನ್ನು ಟ್ರ್ಯಾಕ್ಟರ್ ಬಳಸಬೇಕೆಂದರೆ ಡೀಸೆಲ್ ವೆಚ್ಚ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಚು ಕಡಿಮೆ ಮಾಡಲು ಸೈಕಲ್ ಎಡೆಕುಂಟೆ ಉಪಯುಕ್ತವಾಗಿದೆ ಎಂದು ರೈತ ಸಂಜೀವಪ್ಪ ರೆಡ್ಡಿ ಹೇಳಿದ್ದಾರೆ. ರೈತನ ಈ ವಿನೂತನ ಕೃಷಿ ಪ್ರಯೋಗ ಇದೀಗ ಸ್ಥಳೀಯ ರೈತರ ಗಮನ ಸೆಳೆಯುತ್ತಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನದ ಉತ್ತಮ ಉದಾಹರಣೆಯಾಗಿ ಪರಿಣಮಿಸಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…