ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್ಗೆ ಎಡೆಕುಂಟೆ ಜೋಡಿಸಿ ಹೊಲದಲ್ಲಿ ಕಳೆ ತೆಗೆಯುವ ಮೂಲಕ ಗಮನ ಸೆಳೆದಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯ ಮಧ್ಯೆ ಬೆಳೆದ ಕಳೆ ತೆಗೆಯಲು ಈ ವಿನೂತನ ಪ್ರಯೋಗ ಕೈಗೊಂಡಿದ್ದಾರೆ.
ಬಳಕೆಯಲ್ಲಿರದ ಹಳೆಯ ಸೈಕಲ್ಗೆ ಕಳೆ ತೆಗೆಯುವ ಕುಂಟೆಯನ್ನು ಅಳವಡಿಸಿ ಹೊಲದಲ್ಲಿ ಬಳಸುತ್ತಿದ್ದಾರೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಾಗೂ ಸುಲಭವಾಗಿ ಕಳೆ ನಿಯಂತ್ರಣ ಮಾಡಬಹುದು ಎಂದು ರೈತರು ತಿಳಿಸಿದ್ದಾರೆ. ಎತ್ತುಗಳು ಸುಲಭವಾಗಿ ಸಿಗುತ್ತಿಲ್ಲ. ಸಿಕ್ಕರೂ ಬಾಡಿಗೆ ದುಬಾರಿಯಾಗಿದೆ. ಇನ್ನು ಟ್ರ್ಯಾಕ್ಟರ್ ಬಳಸಬೇಕೆಂದರೆ ಡೀಸೆಲ್ ವೆಚ್ಚ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಚು ಕಡಿಮೆ ಮಾಡಲು ಸೈಕಲ್ ಎಡೆಕುಂಟೆ ಉಪಯುಕ್ತವಾಗಿದೆ ಎಂದು ರೈತ ಸಂಜೀವಪ್ಪ ರೆಡ್ಡಿ ಹೇಳಿದ್ದಾರೆ. ರೈತನ ಈ ವಿನೂತನ ಕೃಷಿ ಪ್ರಯೋಗ ಇದೀಗ ಸ್ಥಳೀಯ ರೈತರ ಗಮನ ಸೆಳೆಯುತ್ತಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನದ ಉತ್ತಮ ಉದಾಹರಣೆಯಾಗಿ ಪರಿಣಮಿಸಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…