ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್ಗೆ ಎಡೆಕುಂಟೆ ಜೋಡಿಸಿ ಹೊಲದಲ್ಲಿ ಕಳೆ ತೆಗೆಯುವ ಮೂಲಕ ಗಮನ ಸೆಳೆದಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯ ಮಧ್ಯೆ ಬೆಳೆದ ಕಳೆ ತೆಗೆಯಲು ಈ ವಿನೂತನ ಪ್ರಯೋಗ ಕೈಗೊಂಡಿದ್ದಾರೆ.
ಬಳಕೆಯಲ್ಲಿರದ ಹಳೆಯ ಸೈಕಲ್ಗೆ ಕಳೆ ತೆಗೆಯುವ ಕುಂಟೆಯನ್ನು ಅಳವಡಿಸಿ ಹೊಲದಲ್ಲಿ ಬಳಸುತ್ತಿದ್ದಾರೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಾಗೂ ಸುಲಭವಾಗಿ ಕಳೆ ನಿಯಂತ್ರಣ ಮಾಡಬಹುದು ಎಂದು ರೈತರು ತಿಳಿಸಿದ್ದಾರೆ. ಎತ್ತುಗಳು ಸುಲಭವಾಗಿ ಸಿಗುತ್ತಿಲ್ಲ. ಸಿಕ್ಕರೂ ಬಾಡಿಗೆ ದುಬಾರಿಯಾಗಿದೆ. ಇನ್ನು ಟ್ರ್ಯಾಕ್ಟರ್ ಬಳಸಬೇಕೆಂದರೆ ಡೀಸೆಲ್ ವೆಚ್ಚ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಚು ಕಡಿಮೆ ಮಾಡಲು ಸೈಕಲ್ ಎಡೆಕುಂಟೆ ಉಪಯುಕ್ತವಾಗಿದೆ ಎಂದು ರೈತ ಸಂಜೀವಪ್ಪ ರೆಡ್ಡಿ ಹೇಳಿದ್ದಾರೆ. ರೈತನ ಈ ವಿನೂತನ ಕೃಷಿ ಪ್ರಯೋಗ ಇದೀಗ ಸ್ಥಳೀಯ ರೈತರ ಗಮನ ಸೆಳೆಯುತ್ತಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನದ ಉತ್ತಮ ಉದಾಹರಣೆಯಾಗಿ ಪರಿಣಮಿಸಿದೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…