ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್ಗೆ ಎಡೆಕುಂಟೆ ಜೋಡಿಸಿ ಹೊಲದಲ್ಲಿ ಕಳೆ ತೆಗೆಯುವ ಮೂಲಕ ಗಮನ ಸೆಳೆದಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯ ಮಧ್ಯೆ ಬೆಳೆದ ಕಳೆ ತೆಗೆಯಲು ಈ ವಿನೂತನ ಪ್ರಯೋಗ ಕೈಗೊಂಡಿದ್ದಾರೆ.
ಬಳಕೆಯಲ್ಲಿರದ ಹಳೆಯ ಸೈಕಲ್ಗೆ ಕಳೆ ತೆಗೆಯುವ ಕುಂಟೆಯನ್ನು ಅಳವಡಿಸಿ ಹೊಲದಲ್ಲಿ ಬಳಸುತ್ತಿದ್ದಾರೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಾಗೂ ಸುಲಭವಾಗಿ ಕಳೆ ನಿಯಂತ್ರಣ ಮಾಡಬಹುದು ಎಂದು ರೈತರು ತಿಳಿಸಿದ್ದಾರೆ. ಎತ್ತುಗಳು ಸುಲಭವಾಗಿ ಸಿಗುತ್ತಿಲ್ಲ. ಸಿಕ್ಕರೂ ಬಾಡಿಗೆ ದುಬಾರಿಯಾಗಿದೆ. ಇನ್ನು ಟ್ರ್ಯಾಕ್ಟರ್ ಬಳಸಬೇಕೆಂದರೆ ಡೀಸೆಲ್ ವೆಚ್ಚ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಚು ಕಡಿಮೆ ಮಾಡಲು ಸೈಕಲ್ ಎಡೆಕುಂಟೆ ಉಪಯುಕ್ತವಾಗಿದೆ ಎಂದು ರೈತ ಸಂಜೀವಪ್ಪ ರೆಡ್ಡಿ ಹೇಳಿದ್ದಾರೆ. ರೈತನ ಈ ವಿನೂತನ ಕೃಷಿ ಪ್ರಯೋಗ ಇದೀಗ ಸ್ಥಳೀಯ ರೈತರ ಗಮನ ಸೆಳೆಯುತ್ತಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನದ ಉತ್ತಮ ಉದಾಹರಣೆಯಾಗಿ ಪರಿಣಮಿಸಿದೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…