ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್ಗೆ ಎಡೆಕುಂಟೆ ಜೋಡಿಸಿ ಹೊಲದಲ್ಲಿ ಕಳೆ ತೆಗೆಯುವ ಮೂಲಕ ಗಮನ ಸೆಳೆದಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯ ಮಧ್ಯೆ ಬೆಳೆದ ಕಳೆ ತೆಗೆಯಲು ಈ ವಿನೂತನ ಪ್ರಯೋಗ ಕೈಗೊಂಡಿದ್ದಾರೆ.
ಬಳಕೆಯಲ್ಲಿರದ ಹಳೆಯ ಸೈಕಲ್ಗೆ ಕಳೆ ತೆಗೆಯುವ ಕುಂಟೆಯನ್ನು ಅಳವಡಿಸಿ ಹೊಲದಲ್ಲಿ ಬಳಸುತ್ತಿದ್ದಾರೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಾಗೂ ಸುಲಭವಾಗಿ ಕಳೆ ನಿಯಂತ್ರಣ ಮಾಡಬಹುದು ಎಂದು ರೈತರು ತಿಳಿಸಿದ್ದಾರೆ. ಎತ್ತುಗಳು ಸುಲಭವಾಗಿ ಸಿಗುತ್ತಿಲ್ಲ. ಸಿಕ್ಕರೂ ಬಾಡಿಗೆ ದುಬಾರಿಯಾಗಿದೆ. ಇನ್ನು ಟ್ರ್ಯಾಕ್ಟರ್ ಬಳಸಬೇಕೆಂದರೆ ಡೀಸೆಲ್ ವೆಚ್ಚ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಚು ಕಡಿಮೆ ಮಾಡಲು ಸೈಕಲ್ ಎಡೆಕುಂಟೆ ಉಪಯುಕ್ತವಾಗಿದೆ ಎಂದು ರೈತ ಸಂಜೀವಪ್ಪ ರೆಡ್ಡಿ ಹೇಳಿದ್ದಾರೆ. ರೈತನ ಈ ವಿನೂತನ ಕೃಷಿ ಪ್ರಯೋಗ ಇದೀಗ ಸ್ಥಳೀಯ ರೈತರ ಗಮನ ಸೆಳೆಯುತ್ತಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನದ ಉತ್ತಮ ಉದಾಹರಣೆಯಾಗಿ ಪರಿಣಮಿಸಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…