ಡೀಸೆಲ್​ ಮೇಲಿನ ತೆರಿಗೆ ಶೇ.2.73 ರಷ್ಟು ಹೆಚ್ಚಳ: ಇದರಿಂದ ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳ

ಕರ್ನಾಟಕ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ.2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವಾಗಲಿದೆ.

ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾರ್ಚ್‌ 31 ರವರೆಗೂ ಡೀಸೆಲ್‌ ದರವು ಪ್ರತಿ ಲೀಟರ್‌ಗೆ 89.02 ರೂಪಾಯಿ ಇತ್ತು. ಸದ್ಯ 91.02 ರೂಪಾಯಿಗೆ ಹೆಚ್ಚಳವಾಗಿದೆ.

ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಿತ್ತು. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿತ್ತು.

ಮೊದಲೇ ಟೋಲ್‌ ದರ ಹೆಚ್ಚಳದಿಂದ ಬೇಸರದಲ್ಲಿದ್ದ ವಾಹನ ಸವಾರರಿಗೆ ಡಿಸೇಲ್ ದರ ಹೆಚ್ಚಳವಾಗಿರುವುದು ಚಿಂತೆಗೀಡು ಮಾಡಿದೆ.

ಅದೇರೀತಿ ಕರ್ನಾಟಕ ಸರ್ಕಾರ ಹಾಲು ಮತ್ತು ವಿದ್ಯುತ್​ ದರವನ್ನು ಏರಿಕೆ ಮಾಡಿ ಈಗಾಗಲೇ ಶಾಕ್​ ನೀಡಿದೆ. ಇದೀಗ ಮತ್ತೊಂದು ದರ ಏರಿಕೆಯ ಬಿಸಿಯನ್ನು ಜನರಿಗೆ ಮುಟ್ಟಿಸಿದೆ.

Ramesh Babu

Journalist

Recent Posts

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

2 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

14 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

16 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

19 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

20 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

21 hours ago