ಡೀಸೆಲ್​ ಮೇಲಿನ ತೆರಿಗೆ ಶೇ.2.73 ರಷ್ಟು ಹೆಚ್ಚಳ: ಇದರಿಂದ ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳ

ಕರ್ನಾಟಕ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ.2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವಾಗಲಿದೆ.

ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾರ್ಚ್‌ 31 ರವರೆಗೂ ಡೀಸೆಲ್‌ ದರವು ಪ್ರತಿ ಲೀಟರ್‌ಗೆ 89.02 ರೂಪಾಯಿ ಇತ್ತು. ಸದ್ಯ 91.02 ರೂಪಾಯಿಗೆ ಹೆಚ್ಚಳವಾಗಿದೆ.

ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಿತ್ತು. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿತ್ತು.

ಮೊದಲೇ ಟೋಲ್‌ ದರ ಹೆಚ್ಚಳದಿಂದ ಬೇಸರದಲ್ಲಿದ್ದ ವಾಹನ ಸವಾರರಿಗೆ ಡಿಸೇಲ್ ದರ ಹೆಚ್ಚಳವಾಗಿರುವುದು ಚಿಂತೆಗೀಡು ಮಾಡಿದೆ.

ಅದೇರೀತಿ ಕರ್ನಾಟಕ ಸರ್ಕಾರ ಹಾಲು ಮತ್ತು ವಿದ್ಯುತ್​ ದರವನ್ನು ಏರಿಕೆ ಮಾಡಿ ಈಗಾಗಲೇ ಶಾಕ್​ ನೀಡಿದೆ. ಇದೀಗ ಮತ್ತೊಂದು ದರ ಏರಿಕೆಯ ಬಿಸಿಯನ್ನು ಜನರಿಗೆ ಮುಟ್ಟಿಸಿದೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago