ಕೋಲಾರ: ಅಗತ್ಯ ವಸ್ತುಗಳು ಸೇರಿದಂತೆ ಹಾಲು, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸರ್ಕಾರದ ಕ್ರಮವನ್ನು ಖಂಡಿಸಿದರು
ಬೆಲೆ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ರಾಜ್ಯದ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳೋದು ಒಂದು ಮಾಡೋದು ಬೆಲೆ ಏರಿಕೆ ಮೂಲಕ ಇನ್ನೊಂದು ಆಡಳಿತವನ್ನು ನೀಡಲು ಹೊರಟಿದ್ದಾರೆ ಉಚಿತ ಗ್ಯಾರಂಟಿಗಳ ಭರವಸೆ ಮೂಲಕ ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರದಿಂದ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಡಿಸೇಲ್ 2 ರೂ ಹೆಚ್ಚಳ ಸೇರಿದಂತೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು
ಒಂದು ಕಡೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ದ್ರೋಹ ಮಾಡಿದ್ದಾರೆ ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರವು ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ,
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…