ಕೋಲಾರ: ಅಗತ್ಯ ವಸ್ತುಗಳು ಸೇರಿದಂತೆ ಹಾಲು, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸರ್ಕಾರದ ಕ್ರಮವನ್ನು ಖಂಡಿಸಿದರು
ಬೆಲೆ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ರಾಜ್ಯದ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳೋದು ಒಂದು ಮಾಡೋದು ಬೆಲೆ ಏರಿಕೆ ಮೂಲಕ ಇನ್ನೊಂದು ಆಡಳಿತವನ್ನು ನೀಡಲು ಹೊರಟಿದ್ದಾರೆ ಉಚಿತ ಗ್ಯಾರಂಟಿಗಳ ಭರವಸೆ ಮೂಲಕ ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರದಿಂದ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಡಿಸೇಲ್ 2 ರೂ ಹೆಚ್ಚಳ ಸೇರಿದಂತೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು
ಒಂದು ಕಡೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ದ್ರೋಹ ಮಾಡಿದ್ದಾರೆ ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರವು ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ,
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…