ಕೋಲಾರ: ಅಗತ್ಯ ವಸ್ತುಗಳು ಸೇರಿದಂತೆ ಹಾಲು, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸರ್ಕಾರದ ಕ್ರಮವನ್ನು ಖಂಡಿಸಿದರು
ಬೆಲೆ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ರಾಜ್ಯದ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳೋದು ಒಂದು ಮಾಡೋದು ಬೆಲೆ ಏರಿಕೆ ಮೂಲಕ ಇನ್ನೊಂದು ಆಡಳಿತವನ್ನು ನೀಡಲು ಹೊರಟಿದ್ದಾರೆ ಉಚಿತ ಗ್ಯಾರಂಟಿಗಳ ಭರವಸೆ ಮೂಲಕ ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರದಿಂದ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಡಿಸೇಲ್ 2 ರೂ ಹೆಚ್ಚಳ ಸೇರಿದಂತೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು
ಒಂದು ಕಡೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ದ್ರೋಹ ಮಾಡಿದ್ದಾರೆ ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರವು ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ,
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…