ಕೋಲಾರ: ಅಗತ್ಯ ವಸ್ತುಗಳು ಸೇರಿದಂತೆ ಹಾಲು, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸರ್ಕಾರದ ಕ್ರಮವನ್ನು ಖಂಡಿಸಿದರು
ಬೆಲೆ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ರಾಜ್ಯದ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳೋದು ಒಂದು ಮಾಡೋದು ಬೆಲೆ ಏರಿಕೆ ಮೂಲಕ ಇನ್ನೊಂದು ಆಡಳಿತವನ್ನು ನೀಡಲು ಹೊರಟಿದ್ದಾರೆ ಉಚಿತ ಗ್ಯಾರಂಟಿಗಳ ಭರವಸೆ ಮೂಲಕ ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರದಿಂದ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಡಿಸೇಲ್ 2 ರೂ ಹೆಚ್ಚಳ ಸೇರಿದಂತೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು
ಒಂದು ಕಡೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ದ್ರೋಹ ಮಾಡಿದ್ದಾರೆ ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರವು ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ,
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…