Categories: ರಾಜ್ಯ

‘ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ’: ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!- ಮಾಜಿ ಸಿಎಂ ಕುಮಾರಸ್ವಾಮಿ

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದಿದ್ದಾರೆ.

ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಹೇಳಿದ್ದಾರೆ.

ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದಿದ್ದಾರೆ.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago